Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:32 - ಕನ್ನಡ ಸತ್ಯವೇದವು C.L. Bible (BSI)

32 ಸೈನಿಕರು ಯೇಸುಸ್ವಾಮಿಯನ್ನು ಕರೆದುಕೊಂಡು ಊರಹೊರಗೆ ಹೋಗುತ್ತಿದ್ದಾಗ ಸಿರೇನ್ ಪಟ್ಟಣದ ಸಿಮೋನ್ ಎಂಬಾತನನ್ನು ಕಂಡರು. ಯೇಸುವಿನ ಶಿಲುಬೆಯನ್ನು ಹೊತ್ತುಬರುವಂತೆ ಅವನನ್ನು ಬಲವಂತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೆನಿ ಶಾರಾತ್ನಾ ಭಾಯ್ರ್ ಗೆಲ್ಲ್ಯಾ ತನ್ನಾ ಸಿರೆನ್ ಮನ್ತಲ್ಯಾ ಶಾರಾಚೊ ಸಿಮಾವ್ ಮನ್ತಲೊ ಎಕ್ ಮಾನುಸ್ ತೆಂಕಾ ಗಾವ್ಲೊ. ಸೈನಿಕಾನಿ ತೆಕಾ ‍ಜಬರ್‍ದಸ್ತಿನಿ ಜೆಜುಚೊ ಕುರಿಸ್ ವಾವುನ್ ನ್ಹೆವ್ಕ್ ಲಾವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:32
17 ತಿಳಿವುಗಳ ಹೋಲಿಕೆ  

ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಈತನು ಅಲೆಕ್ಸಾಂಡರ್ ಹಾಗೂ ರೂಫ ಎಂಬವರ ತಂದೆ. ಯೇಸುಸ್ವಾಮಿಯ ಶಿಲುಬೆಯನ್ನು ಹೊರುವಂತೆ ಸೈನಿಕರು ಅವನನ್ನು ಬಲವಂತಮಾಡಿದರು.


ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು.


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.


ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಹಾಗು ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲ ಪಾಳೆಯದ ಹೊರಗೆ, ವೇದಿಕೆಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.


“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು