Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:4 - ಕನ್ನಡ ಸತ್ಯವೇದವು C.L. Bible (BSI)

4 “ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಪ್ಪಿಲ್ಲದವನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ಪಾಪಮಾಡಿದೆನು ಅಂದನು. ಅದಕ್ಕವರು - ಅದು ನಮಗೇನು? ನೀನೇ ನೋಡಿಕೋ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 “ಎಕ್ ಚುಕ್ ನಸಲ್ಲ್ಯಾ ಮಾನ್ಸಾಕ್ ಜಿವಾನಿ ಮಾರುಕ್ ಧರುನ್ ದಿವ್ನ್ ಮಿಯಾ ಚುಕ್ ಕರ್‍ಲೊ!” ಮಟ್ಲ್ಯಾನ್. ತನ್ನಾ ತೆನಿ,“ಅಮಿ ಕಶ್ಯಾಕ್ ಹೆಚ್ಯಾ ವಿಶಯಾತ್ ಚಿಂತಾ ಕರುಚೆ? ತುಜೆ ಸಮಸ್ಯೆ ತೆ ತಿಯಾಚ್ ಬಗುನ್ ಘೆ!” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:4
33 ತಿಳಿವುಗಳ ಹೋಲಿಕೆ  

ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಮರಣದಂಡನೆ ವಿಧಿಸಲು ಯಾವ ಕಾರಣವಿಲ್ಲದಿದ್ದರೂ ಅವರನ್ನು ಕೊಲ್ಲಿಸುವಂತೆ ಪಿಲಾತನನ್ನು ಕೇಳಿಕೊಂಡರು.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.


ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.


ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.


“ಇಂಥ ಎಷ್ಟೋ ಮಾತುಗಳನ್ನು ಕೇಳಿದ್ದೇನೆ ನೀವೆಲ್ಲರು ಆದರಿಸುವವರಲ್ಲ, ಬಾಧಿಸುವವರೇ.


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.


ಫರೋಹನು ಆ ರಾತ್ರಿಯಲ್ಲೆ ಮೋಶೆ ಮತ್ತು ಆರೋನರನ್ನು ಕರೆಯಿಸಿದನು. “ನೀವೂ ಹಾಗು ಇಸ್ರಯೇಲರೆಲ್ಲರೂ ನನ್ನ ಜನರನ್ನು ಬಿಟ್ಟು ಹೊರಟುಹೋಗಿ.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.


ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು