Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:51 - ಕನ್ನಡ ಸತ್ಯವೇದವು C.L. Bible (BSI)

51 ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತನ್ನಾ ದೆವಾಚ್ಯಾ ಗುಡಿತ್ ಭಾಂದಲ್ಲೊ ಫಡ್ದೊ ವೈನಾ ಖಾಯ್ಲ್ ಪತರ್ ಪಿಂಜುನ್ ದೊನ್ ಭಾಗ್ ಹೊಲೊ. ಸಗ್ಳಿ ಜಿಮಿನ್ ಹಾಲ್ಲಿ ಅನಿ ಮೊಟ್ಯಾ-ಮೊಟ್ಯಾ ಗುಂಡ್ಯಾಕ್ನಿ ಬಿರ್‍ಕಾ ಪಡ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:51
26 ತಿಳಿವುಗಳ ಹೋಲಿಕೆ  

ಆಗ ಮಹಾದೇವಾಲಯದ ತೆರೆ ಮೇಲಿನಿಂದ ಕೆಳಗಿನವರೆಗೂ ಇಬ್ಭಾಗವಾಗಿ ಸೀಳಿಹೋಯಿತು.


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ಮಹಾದೇವಾಲಯದ ತೆರೆಯು ಇಬ್ಭಾಗವಾಗಿ ಸೀಳಿಹೋಯಿತು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು.


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ಸೊಲೊಮೋನನು ಪರದೆಯನ್ನು ನೀಲಿ, ಊದಾ, ಕೆಂಪು ವರ್ಣಗಳುಳ್ಳ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳನ್ನು ಕಸೂತಿ ಹಾಕಿಸಿದನು.


ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.


ದಂಡು ಹೊರಡುವಾಗ ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಗರ್ಭಗುಡಿಯನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಬೇಕು.


ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು