Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:6 - ಕನ್ನಡ ಸತ್ಯವೇದವು C.L. Bible (BSI)

6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು, “ಇದು ರಕ್ತದ ಕ್ರಯ. ಇದನ್ನು ಕಾಣಿಕೆ ಕೋಶದಲ್ಲಿ ಹಾಕುವುದು ಸರಿಯಲ್ಲ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮಹಾಯಾಜಕರು ಆ ಹಣವನ್ನು ತೆಗೆದುಕೊಂಡು ಅದು ಜೀವಹತ್ಯಕ್ಕೆ ಕೊಟ್ಟ ಕ್ರಯವಾದ್ದರಿಂದ ಅದನ್ನು ಕಾಣಿಕೇಪೆಟ್ಟಿಗೆಯಲ್ಲಿ ಹಾಕಬಾರದು ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮುಖ್ಯ ಯಾಜಕಾನಿ ಹೆ ಪೈಸೆ ಯೆಚುನ್ ಘೆಟ್ಲ್ಯಾನಿ ಅನಿ, “ಎಕಾ ಮಾನ್ಸಾಚೊ ಜಿವ್ ಕಾಡುಕ್ ಮನುನ್ ದಿಲ್ಲೆ ಪೈಸೆ ಹೆ ಅನಿ ಹೆ ಪೈಸೆ ಕಾನಿಕಿಚ್ಯಾ ಡಬ್ಬ್ಯಾತ್ ಥವ್ತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಚುಕ್ ಹೊತಾ.”ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:6
8 ತಿಳಿವುಗಳ ಹೋಲಿಕೆ  

ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ಅಂಧನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ಕಡೆಗೆ ಒಂದು ನಿರ್ಧಾರಕ್ಕೆ ಬಂದರು. ಪರದೇಶಿಗಳನ್ನು ಹೂಳುವುದಕ್ಕೋಸ್ಕರ ‘ಕುಂಬಾರನ ಹೊಲ’ವನ್ನು ಆ ಹಣಕೊಟ್ಟು ಕೊಂಡುಕೊಂಡರು.


ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿಬಿಟ್ಟರೆ ಸಾಕು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು