Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:20 - ಕನ್ನಡ ಸತ್ಯವೇದವು C.L. Bible (BSI)

20 ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ತೆಂಕಾ ಮಿಯಾ ತುಮ್ಕಾ ಸಾಂಗಲ್ಲ್ಯಾ ಸಗ್ಳ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲುಕ್ ಶಿಕ್ವಾ, ಕನ್ನಾಬಿ ಮಿಯಾ ತುಮ್ಚ್ಯಾ ವಾಂಗ್ಡಾ ಹಾಂವ್. ಹ್ಯಾ ಜಗಾಚ್ಯಾ ಅಕ್ರಿ ಪತರ್‍ಬಿ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:20
48 ತಿಳಿವುಗಳ ಹೋಲಿಕೆ  

ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ನೀವು ಸದಾ ನನ್ನನ್ನು ಸ್ಮರಿಸಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಸಾಂಪ್ರದಾಯಿಕ ರೀತಿನೀತಿಗಳನ್ನು ಸರಿಯಾಗಿ ಪಾಲಿಸಿಕೊಂಡು ಬರುತ್ತಿದ್ದೀರಿ; ಇದಕ್ಕಾಗಿ ನಿಮ್ಮನ್ನು ಮೆಚ್ಚುತ್ತೇನೆ.


ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಯೆಹೋಯಾದಾವನ ಮಗ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ; ನನ್ನ ಒಡೆಯರ ಹಾಗು ಅರಸರ ದೇವರಾದ ಸರ್ವೇಶ್ವರ ಇದನ್ನು ಸ್ಥಿರಪಡಿಸಲಿ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ನಾವು ಮರುಭೂಮಿಯಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸುವ ಪ್ರಕಾರ ಬಲಿಯೊಪ್ಪಿಸಬೇಕಾಗಿದೆ’." ಎಂದನು.


ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು