Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ದೆವಾಚ್ಯಾ ದೆವ್‍ದುತಾ ತ್ಯಾ ಬಾಯ್ಕಾಮನ್ಸಾಕ್ನಿ, ತುಮಿ ಭಿಂಯಾತಲಿ ಗರಜ್ ನಾ, ತುಮಿ ಕುರ್ಸಾ ವರ್‍ತಿ ಮಾರಲ್ಲ್ಯಾ ಜೆಜುಕ್ ಹುಡ್ಕುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:5
17 ತಿಳಿವುಗಳ ಹೋಲಿಕೆ  

ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ.


ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;


ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ.


ಆಗ ಯೇಸು ಅವರಿಗೆ, “ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ,” ಎಂದು ಹೇಳಿದರು.


ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ಕಾವಲಿನವರು ಆತನನ್ನು ಕಂಡು ಭಯದಿಂದ ನಡುಗುತ್ತಾ ಸತ್ತಂತಾದರು.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು