Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಸೈತಾನನು ಆತನನ್ನು ಬಿಟ್ಟುಬಿಟ್ಟನು. ಮತ್ತು ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಸೈತಾನನು ಯೇಸುವನ್ನು ಬಿಟ್ಟುಹೋದನು. ಆಗ ಕೆಲವು ದೇವದೂತರು ಬಂದು ಆತನನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಗಿರೊ ಜೆಜುಕ್ ಸೊಡುನ್ ಗೆಲೊ; ತನ್ನಾ ದೆವಾಚಿ ದುತಾ ಯೆಲಿ, ಅನಿ ತೆಚಿ ಮಜತ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:11
13 ತಿಳಿವುಗಳ ಹೋಲಿಕೆ  

ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.


ಹೀಗೆ ಪಿಶಾಚಿ ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ ತಕ್ಕ ಕಾಲಬರುವ ತನಕ ಅವರನ್ನು ಬಿಟ್ಟುಹೋಯಿತು.


ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.


ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು.


“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು