Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:21 - ಕನ್ನಡ ಸತ್ಯವೇದವು C.L. Bible (BSI)

21 ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅಲ್ಲಿಂದ ಮುಂದೆ ಹೋಗಿ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಇವರನ್ನೂ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ನೋಡಿದನು. ಅವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿದ್ದರು. ಅವರು ಮೀನು ಹಿಡಿಯಲು ತಮ್ಮ ಬಲೆಗಳನ್ನು ಸರಿಪಡಿಸಿಕೊಳ್ಳುತ್ತಿದ್ದರು. ಯೇಸು ಇವರನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೊ ಅನಿ ಉಲ್ಲೆ ಫಿಡೆ ಗೆಲೊ, ಥೈ ಜೆಬೆದೆವಾಚಿ ಪೊರಾ ಜಾಕೊಬ್ ಅನಿ ಜುವಾಂವ್ ಮನ್ತಲೆ ದೊಗೆ ಜಾನಾ ಭಾವ್-ಭಾವ್ ತೆಕಾ ದಿಸ್ಲೆ, ತೆನಿ ಢೊನಿತ್ ಬಸುನ್ ಅಪ್ನಾಚೊ ಬಾಬಾ ಜೆಬೆದೆವಾಚ್ಯಾ ವಾಂಗ್ಡಾ ಅಪ್ನಾಚಿ ಜಾಳಿ ಸಮಾ ಕರುಕ್ ಲಾಗಲ್ಲ್ಯಾನಿ, ಜೆಜುನ್ ತೆಂಕಾ ಬಲ್ವುಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:21
12 ತಿಳಿವುಗಳ ಹೋಲಿಕೆ  

ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು).


ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ;


ಯೊವಾನ್ನನ ಸಹೋದರ ಯಕೋಬನನ್ನು ಖಡ್ಗದಿಂದ ಕೊಲ್ಲಿಸಿದನು.


ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿ ಇದ್ದರು.


ಅನಂತರ ಪೇತ್ರ, ಯಕೋಬ ಹಾಗು ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯೀರನ ಮನೆಯನ್ನು ತಲುಪಿದರು.


ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು.


ಆರು ದಿನಗಳ ಬಳಿಕ ಪೇತ್ರ, ಯೊವಾನ್ನ ಇವರನ್ನು ಯೇಸುಸ್ವಾಮಿ ಪ್ರತ್ಯೇಕವಾಗಿ ತಮ್ಮೊಡನೆ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.


ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು