Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:14 - ಕನ್ನಡ ಸತ್ಯವೇದವು C.L. Bible (BSI)

14 “ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿದ ಪಟ್ಟಣ ಮರೆಯಾಗಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ತುಮಿ ಸಗ್ಳ್ಯಾ ಜಗಾಚ್ಯಾ ಲೊಕಾಕ್ನಿ ಉಜ್ವೊಡ್ ಅಸ್ಲ್ಯಾ ಬಾಸೆನ್. ಎಕ್ ಮಡ್ಡಿ ವರ್‍ತಿ ಭಾಂದಲ್ಲೆ ಮೊಟೆ ಗಾಂವ್ ನಿಪುನ್ ರ್‍ಹಾವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:14
16 ತಿಳಿವುಗಳ ಹೋಲಿಕೆ  

ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.


ಅವಿಶ್ವಾಸಿಗಳೊಡನೆ ಒಂದಾಗಬೇಡಿ. ಧರ್ಮಕ್ಕೂ ಅಧರ್ಮಕ್ಕೂ ಸಾಟಿಯೆಲ್ಲಿ? ಬೆಳಕಿಗೂ ಕತ್ತಲೆಗೂ ಎಲ್ಲಿಯ ಸಂಬಂಧ?


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು.


ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು