Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:26 - ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನೀವು ನಿಮ್ಮ ಸಾಲವನ್ನೆಲ್ಲ ತೀರಿಸುವ ತನಕ ಸೆರೆಯಿಂದ ಬಿಡುಗಡೆ ಆಗುವುದಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಜ್ಯಾ ದಂಡಾಚೊ ಎಕ್-ಎಕ್ ಪೈಸೊ ಸೈತ್ ಭರುನ್ ಹೊಯ್ ಪತರ್ ತಿಯಾ ಥೈಚ್ ರ್‍ಹಾತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:26
10 ತಿಳಿವುಗಳ ಹೋಲಿಕೆ  

ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ.


ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ,’ ಎಂದ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ.


ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.


ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು