Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:28 - ಕನ್ನಡ ಸತ್ಯವೇದವು C.L. Bible (BSI)

28 ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖರೆ ಮಿಯಾ ತುಮ್ಕಾ ಸಾಂಗ್ತಾ: ಕೊನ್ತರ್ ಎಕ್ಲ್ಯಾನ್ ಎಕ್ ಬಾಯ್ಕೊಮನ್ಸಿಕ್ ಬಗುನ್ ಬುರ್ಶಿ ಆಶಾ ಕರ್ಲ್ಯಾರ್, ತೆನಿ ಅಪ್ನಾಚ್ಯಾ ಮನಾತುಚ್ ತಿಚೆಕ್ಡೆ ವೆಭಿಚಾರ್ ಕರ್ಲ್ಯಾ ಸರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:28
20 ತಿಳಿವುಗಳ ಹೋಲಿಕೆ  

ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ನಿನ್ನ ಹೃದಯ ಅವಳ ಬೆಡಗನ್ನು ಮೋಹಿಸದಿರಲಿ; ಕಣ್ಣು ಮಿಟುಕಿಸಿ ಅವಳು ನಿನ್ನನ್ನು ವಶಮಾಡಿಕೊಳ್ಳದಿರಲಿ.


ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.


ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ನನ್ನ ಹೃದಯ ಪರಸ್ತ್ರೀಗೆ ಮಾರುಹೋಗಿದ್ದರೆ ನೆರೆಯವಳ ಬಾಗಿಲ ಬಳಿ ನಾನು ಹೊಂಚುಹಾಕಿದ್ದರೆ,


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ನಾ ಬಲ್ಲೆ ಸರ್ವಸಂಪೂರ್ಣತೆಗೂ ಮಿತಿ ಉಂಟೆಂದು I ನಿನ್ನ ಆಜ್ಞೆಗಳಾದರೋ ಅಪರಿಮಿತವಾದುವೆಂದು II


ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಪರಸ್ತ್ರೀ ಸಂಭೋಗದಿಂದ ಅಶುದ್ಧರಾಗಬಾರದು.


“ಒಬ್ಬನು ಪರನ ಹೆಂಡತಿಯೊಡನೆ ವ್ಯಭಿಚಾರ ಮಾಡಿ ಸಿಕ್ಕಿಬಿದ್ದರೆ ಆ ಸ್ತ್ರೀಪುರುಷ ಇಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಇಂಥ ಕೇಡನ್ನು ಇಸ್ರಯೇಲರಿಂದ ತೆಗೆದುಹಾಕಬೇಕು.


ಬಾಬಿಲೋನಿಯಾದ ಆ ವ್ಯಕ್ತಿಗಳ ಬಳಿಗೆ ದೂತರನ್ನು ಕಳುಹಿಸುತ್ತಿದ್ದಳು.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು