Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:19 - ಕನ್ನಡ ಸತ್ಯವೇದವು C.L. Bible (BSI)

19 “ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 “ಹಿತ್ತೆ ಹ್ಯಾ ಜಗಾತ್ ತುಮ್ಚೆಸಾಟ್ನಿ ಬದಿಕ್ ಗೊಳಾ ಕರುನ್ ಥವ್ನಕಾಶಿ, ಹಿತ್ತೆ ತೆಕಾ ವಾಳ್ಟಿ ಲಾಗ್ತಾ ಅನಿ ಜಂಗ್‍ಲಾಗುನ್ ಹಾಳ್ ಹೊವ್ನ್ ಜಾತಾ, ಅನಿ ಚೊರಾ ಘರಾ ಫೊಡುನ್ ಕಾಡುನ್ ಚೊರುನ್ ಘೆವ್ನ್ ಜಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:19
23 ತಿಳಿವುಗಳ ಹೋಲಿಕೆ  

ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


“ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಅವನು ವ್ಯಥೆಗೀಡಾದುದನ್ನು ಕಂಡ ಯೇಸು, “ಸಿರಿವಂತರಿಗೆ ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟೊಂದು ಕಷ್ಟ!


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಬಂಗಾರದಲಿ ನಾನು ಭರವಸೆಯಿಟ್ಟಿದ್ದರೆ ಅಪರಂಜಿಯನೇ ನಾನು ನೆಚ್ಚಿಕೊಂಡಿದ್ದರೆ,


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಕಳ್ಳನು ಕನ್ನ ಕೊರೆಯುತ್ತಿರುವಾಗಲೆ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.


ಕಳ್ಳರು ಕತ್ತಲಲ್ಲಿ ಮನೆಗೆ ನುಗ್ಗುತ್ತಾರೆ ಕನ್ನ ಕೊರೆದು ಬೆಳಕು ಕಾಣದೆ ಇರುತ್ತಾರೆ ಹಗಲಲ್ಲಿ ಅವಿತುಕೊಂಡು.


ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು. ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು.


ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು