Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:21 - ಕನ್ನಡ ಸತ್ಯವೇದವು C.L. Bible (BSI)

21 “ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಾಕಾ ಧನಿಯಾ, ಧನಿಯಾ ಮನುನ್ ಬಲ್ವುತಲೆ ಸಗ್ಳೆ ಜಾನಾ ಸರ್ಗಾಚ್ಯಾ ರಾಜಾತ್ ಭುತ್ತುರ್ ಜವ್ಕ್ ಹೊಯ್ನಾ, ಜೆ ಕೊನ್ ಮಾಜ್ಯಾ ಬಾಬಾಚ್ಯಾ ಯವ್ಜನಿ ಸರ್ಕೆ ಹಾಯ್ ತೆಚ್ ಕರ್‍ತಾ ತೊ ಸರ್‍ಗಾಚ್ಯಾ ರಾಜಾತ್ ಭುತ್ತುರ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:21
49 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ,” ಎಂದರು.


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ.


ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತ ಒಂಟೆ ಸೂಜಿಗಣ್ಣಿನಲ್ಲಿ ನುಸುಳುವುದು ಸುಲಭ!” ಎಂದರು.


ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು.


ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು.


“ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.


ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ.


ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು.


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


“ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.


ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು