Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:25 - ಕನ್ನಡ ಸತ್ಯವೇದವು C.L. Bible (BSI)

25 ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಪವ್ಸ್ ವೊತ್ಲೊ, ನ್ಹಯ್ಯಾ ಭರುನ್ ವೊತ್ಲ್ಯಾ, ಮೊಟೊ ವಾರೊ ಉಟ್ಲೊ ಅನಿ ತ್ಯಾ ವಾರ್‍ಯಾನ್ ಘರಾಕ್ ಮಾರ್‍ಲ್ಯಾನ್. ಖರೆ ತೆ ಘರ್ ಕೊಸ್ಳುನ್ ಪಡುಕ್ನಾ, ಕಶ್ಯಾಕ್ ಮಟ್ಲ್ಯಾರ್ ತೆ ಘರ್ ಗುಂಡ್ಯಾ ವರ್‍ತಿ ಭಾಂದಲ್ಲೆ ಹೊತ್ತೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:25
17 ತಿಳಿವುಗಳ ಹೋಲಿಕೆ  

ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.


ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು