Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:28 - ಕನ್ನಡ ಸತ್ಯವೇದವು C.L. Bible (BSI)

28 ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜುನ್ ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ತನ್ನಾ ಲೊಕಾಂಚೆ ತಾಂಡೆ ತೆನಿ ಶಿಕ್ವುತಲಿ ರಿತ್ ಬಗುನ್ ಲೈ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:28
18 ತಿಳಿವುಗಳ ಹೋಲಿಕೆ  

ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು.


ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಸಬ್ಬತ್‍ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ?


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.


ಇದನ್ನು ಕೇಳಿದ ಜನರ ಗುಂಪು ಯೇಸುವಿನ ಬೋಧನೆಯನ್ನು ಕುರಿತು ಅತ್ಯಾಶ್ಚರ್ಯಪಟ್ಟಿತು.


ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನು ಕೇಳಲು ಆತುರರಾಗಿದ್ದರು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.


ಇದನ್ನೆಲ್ಲಾ ಬೋಧಿಸಿ ಆದಮೇಲೆ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ,


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ಈ ವಿಷಯಗಳನ್ನು ಹೇಳಿಯಾದ ಮೇಲೆ, ಯೇಸುಸ್ವಾಮಿ ಗಲಿಲೇಯವನ್ನು ಬಿಟ್ಟು ಜೋರ್ಡನ್ ನದಿಯ ಆಚೆಕಡೆ ಇದ್ದ ಜುದೇಯ ಪ್ರಾಂತ್ಯಕ್ಕೆ ಬಂದರು.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.


ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು.


ಜನರಿಗೆ ಮನಮುಟ್ಟುವಂತೆ ಬೋಧನೆಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು