Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:20 - ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜೆಜುನ್ ತೆಕಾ, “ಕೊಲ್ಯಾಕ್ನಿ ಢುರೆ ಹಾತ್ ಮಳ್ಬಾ ವೈಲ್ಯಾ ಫಾಂಕ್ರಾಕ್ನಿ ಘಂಟೆ ಹಾತ್, ಖರೆ ಮಾನ್ಸಾಚೊ ಲೆಕ್ ಮನುನ್ ಬಲ್ವುತಲ್ಯಾ ಮಾಕಾ ಟಕ್ಲೆ ಟೆಕುಕ್ ಸೈತ್ ಜಾಗೊ ನಾ”. ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:20
35 ತಿಳಿವುಗಳ ಹೋಲಿಕೆ  

ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀಶ್ವರ I ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ I ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ II


ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಅಲ್ಲಿಂದ ತ್ವರೆಯಾಗಿ ಹೋಗಿ, ಮರಿಯಳನ್ನೂ ಜೋಸೇಫನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡರು.


ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು.


ಬಡವ ನಾನು, ನನಗಿದೆ ಕುಂದುಕೊರತೆ I ನನ್ನ ಎದೆಗೆ ಅಲಗೇ ನಾಟಿದಂತಿದೆ II


ದೇವಾ, ನಾ ನೊಂದುಬೆಂದಿಹೆನಯ್ಯಾ I ಉದ್ಧರಿಸಿ ನನ್ನನು ಕಾಪಾಡಯ್ಯಾ II


ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ಗೂಡುಕಟ್ಟಿಕೊಳ್ಳುವುವು ಹಕ್ಕಿಗಳಾ ಮರಗಳಲಿ I ವಾಸಮಾಡುವುವು ಕೊಕ್ಕರೆಗಳು ತುರಾಯಿಮರಗಳಲಿ II


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ಅವುಗಳ ಅರುಗಲ್ಲೇ ಇವೆ ಹಕ್ಕಿಗಳ ಗೂಡುಗಳು I ಕೇಳುತಿವೆ ಕೊಂಬೆಗಳಿಂದಾ ಪಕ್ಷಿಗಳ ಕಲರವಗಳು II


ಅದಕ್ಕೆ ಯೇಸು, “ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು;


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು.


“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.


ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ಯೂದನು ಹೊರಟುಹೋದಮೇಲೆ ಯೇಸು ಸ್ವಾಮಿ ಹೀಗೆಂದರು: “ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು.


“ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು