Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:29 - ಕನ್ನಡ ಸತ್ಯವೇದವು C.L. Bible (BSI)

29 ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆನಿ ಎಗ್ದಮ್, “ದೆವಾಚ್ಯಾ ಲೆಕಾ ಅಮ್ಚ್ಯಾಕ್ನಾ ತುಕಾ ಕಾಯ್‍ ಪಾಜೆ? ಅಮ್ಚೊ ಎಳ್ ಯೆವ್ಚ್ಯಾ ಅದ್ದಿಚ್ ಅಮ್ಕಾ ಶಿಕ್ಷಾ ದಿವ್ಕ್ ಯೆಲೆ ಕಾಯ್?” ಮನುನ್ ಕಿಂಚ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:29
20 ತಿಳಿವುಗಳ ಹೋಲಿಕೆ  

ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.


ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.


ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಅದಕ್ಕೆ ಯೇಸು, “ಅಮ್ಮಾ, ಇದನ್ನು ನನಗೇಕೆ ಹೇಳುತ್ತೀ? ನನ್ನ ಗಳಿಗೆ ಇನ್ನೂ ಬಂದಿಲ್ಲ,” ಎಂದು ಉತ್ತರಕೊಟ್ಟರು.


ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.


ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ", ಎಂದು ಕಿರುಚುತ್ತಿದ್ದವು.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು.


“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.


ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧ ಮಾಡುವುದಕ್ಕೇನು ಕಾರಣ?” ಎಂದು ಕೇಳಿದನು.


ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.


ಯೋಷೀಯನು ಅವನಿಗೆ ವಿರುದ್ಧ ಹೊರಟನು. ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಜುದೇಯದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟಿದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆ ಆಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ನೀನು ಕೈಯೆತ್ತುವುದನ್ನು ಬಿಡು. ಇಲ್ಲವಾದರೆ, ಅವರು ನಿನ್ನನ್ನು ನಾಶಮಾಡುವರು,” ಎಂದು ಹೇಳಿಸಿದನು.


ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪದೂರದಲ್ಲೇ ಮೇಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು