Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:3 - ಕನ್ನಡ ಸತ್ಯವೇದವು C.L. Bible (BSI)

3 ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಆ ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುನ್ ಅಪ್ನಾಚೊ ಹಾತ್ ಲಾಂಬ್ ಕರುನ್ ತೆಕಾ ಲಾವ್ಲ್ಯಾನ್, ಅನಿ, “ಮಾಕಾ ಮನ್ ಹಾಯ್, ತಿಯಾ ಪವಿತ್ರ್ ಹೊ”. ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತೆಚೊ ರೊಗ್ ಗುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:3
19 ತಿಳಿವುಗಳ ಹೋಲಿಕೆ  

ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು.


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.


“ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.


ನಾಮಾನನು ಇದನ್ನು ಕೇಳಿ ಕೋಪಗೊಂಡನು . “ಇದೇನು ! ಇವನು ಖಂಡಿತ ವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರ ನ ಹೆಸರು ಹೇಳಿ, ನನ್ನ ಚರ್ಮ ದ ಮೇಲೆ ಕೈಯಾಡಿಸಿ , ರೋಗ ವಾಸಿ ಮಾಡುವನೆಂದು ನೆನಸಿದೆ .


ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು.


ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.


ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು.


ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು.


ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್‍” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ).


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು.


ಅನಂತರ ಬತ್ತಿದ ಕೈಯುಳ್ಳವನನ್ನು ನೋಡಿ, “ಕೈಚಾಚು” ಎಂದರು. ಅವನು ಚಾಚಿದನು. ಅದು ಪುನಶ್ಚೇತನಗೊಂಡು ಇನ್ನೊಂದು ಕೈಯ ಹಾಗೆ ಸಂಪೂರ್ಣ ಸ್ವಸ್ಥವಾಯಿತು.


ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು