Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:6 - ಕನ್ನಡ ಸತ್ಯವೇದವು C.L. Bible (BSI)

6 “ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪ್ರಭುವೇ, ನನ್ನ ಆಳು ಪಾರ್ಶ್ವವಾಯುವಿನಿಂದ ಬಹಳ ಕಷ್ಟಪಡುತ್ತಾ ಮನೆಯಲ್ಲಿ ಬಿದ್ದಿದ್ದಾನೆ ಎಂದು ಹೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಪ್ರಭುವೇ, ನನ್ನ ಸೇವಕನು ಕಾಯಿಲೆಯಿಂದ ಹಾಸಿಗೆಯ ಮೇಲಿದ್ದಾನೆ. ಅವನು ಬಹಳ ನೋವಿನಿಂದ ನರಳುತ್ತಿದ್ದಾನೆ” ಎಂದು ಸಹಾಯಕ್ಕಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ಧನಿಯಾ, ಮಾಜೊ ಆಳ್ ವಾರ್‍ಯಾನ್‍ ಮಾರುನ್ ಹಾತ್ರಾನಾತ್ ಪಡ್ಲಾ, ತೊ ಲೈ ತರಾಸ್ ಕರುನ್ ಘೆವ್ಲಾ”. ಮನುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:6
12 ತಿಳಿವುಗಳ ಹೋಲಿಕೆ  

ಯಜಮಾನರೇ, ಸ್ವರ್ಗಲೋಕದಲ್ಲಿ ನಿಮಗೂ ಒಬ್ಬ ಒಡೆಯನಿದ್ದಾನೆಂಬುದನ್ನು ತಿಳಿದುಕೊಂಡು ನಿಮ್ಮ ಮನೆಯಾಳುಗಳನ್ನು ನ್ಯಾಯಬದ್ಧ ರೀತಿಯಲ್ಲಿ ನೋಡಿಕೊಳ್ಳಿ.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು.


ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?


ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.


ಕೂಡಲೇ ಕೊರ್ನೇಲಿಯನು ತನ್ನ ಇಬ್ಬರು ಪರಿಚಾರಕರನ್ನೂ ತನ್ನ ಪಹರೆಯವರಲ್ಲಿ ಧರ್ಮನಿಷ್ಠನಾಗಿದ್ದ ಒಬ್ಬ ಸೈನಿಕನನ್ನೂ ಕರೆದು,


ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಯೇಸು, “ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು