Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:5 - ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲಿನ ಜನರಾದ ನೀವು ಇದನ್ನು ಕಣ್ಣಾರೆ ಕಂಡು, “ಸರ್ವೇಶ್ವರ ಇಸ್ರಯೇಲಿನ ಹೊರಗೂ ಮಹಾಮಹಿಮೆಯುಳ್ಳವರು!” ಎಂದು ಹೇಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವೇ ಇದನ್ನು ಕಣ್ಣಾರೆ ಕಂಡು - ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ ಮಹಾಮಹಿಮೆಯುಳ್ಳವನು ಅಂದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದನ್ನು ನೋಡಿದವರಾದ ನೀವು ಹೇಳುತ್ತೀರಿ, “ಯೆಹೋವನು ಮಹಾದೇವರು. ಇಸ್ರೇಲಿನ ಹೊರಗೂ ತನ್ನ ಪ್ರತಾಪವನ್ನು ತೋರಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಕಣ್ಣುಗಳಿಂದ ನೋಡಿ, ‘ಇಸ್ರಾಯೇಲಿನ ಮೇರೆ ಆಚೆಗೂ ಯೆಹೋವ ದೇವರು ಮಹೋನ್ನತರು!’ ಎಂದು ನೀವು ಹೇಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:5
14 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನಡೆಸಿದ ಆ ವಿಶೇಷಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಾ ಇದ್ದೇನೆ.


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಆದುದರಿಂದ ಸರ್ವೇಶ್ವರ, ಜುದೇಯ ನಾಡಿನ ಮೇಲೂ ಜೆರುಸಲೇಮಿನ ಮೇಲೂ ಕೋಪಗೊಂಡು ಅವುಗಳನ್ನು ಭಯಭೀತಿಗೂ ಹಾಸ್ಯಪರಿಹಾಸ್ಯಗಳಿಗೂ ಆಸ್ಪದವಾಗಿಸಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


ಈಗ ಸರ್ವೇಶ್ವರ ನಿಮ್ಮ ಕಣ್ಮುಂದೆಯೇ ಮಾಡುವ ಮಹತ್ಕಾರ್ಯವನ್ನು ಹತ್ತಿರಬಂದು ನೋಡಿರಿ.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಆಗ ನಿಮ್ಮ ಪೂರ್ವಜರು ನನಗೆ ಮೊರೆಯಿಟ್ಟರು. ನಾನು ಅವರಿಗೂ ಈಜಿಪ್ಟಿನವರಿಗೂ ಮಧ್ಯೆ ಕಾರ್ಗತ್ತಲೆಯನ್ನು ಉಂಟುಮಾಡಿದೆ. ಇದಲ್ಲದೆ ಈಜಿಪ್ಟಿನವರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆ. ನಾನು ಈಜಿಪ್ಟಿನಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವೇ ಸಾಕ್ಷಿಗಳು.


ಪೆಗೋರದ ಬಾಳ್ ದೇವತೆಯ ವಿಷಯದಲ್ಲಿ ಸರ್ವೇಶ್ವರ ಮಾಡಿದ ಕಾರ್ಯವನ್ನು ನೀವು ನೋಡಿದ್ದೀರಷ್ಟೆ; ಆ ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆಯಿಂದ ನಾಶಮಾಡಿದರಲ್ಲವೆ?


ಇಸ್ರಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು; ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು