Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:14 - ಕನ್ನಡ ಸತ್ಯವೇದವು C.L. Bible (BSI)

14 ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:14
22 ತಿಳಿವುಗಳ ಹೋಲಿಕೆ  

ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ಗಂಡಬಿಟ್ಟು ಮನನೊಂದಿರುವ ಪತ್ನಿ ನೀನು ಹೌದು, ತ್ಯಜಿಸಲಾದ ಯೌವನದ ಪತ್ನಿ ನೀನು. ಸರ್ವೇಶ್ವರ ಕನಿಕರಿಸಿ ಕರೆದಿಹನು ನಿನ್ನನು. ಆ ನಿನ್ನ ದೇವರ ನುಡಿಯಿದು :


ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.


ಲಾಬಾನನು ಮುಂದುವರೆದು, “ನೀನು ನನ್ನ ಹೆಣ್ಣು ಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಹೆಣ್ಣುಗಳನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ನಮ್ಮಲ್ಲಿ ಯಾರು ಇಲ್ಲದಿದ್ದರೂ ದೇವರೇ ನಮ್ಮ ಒಪ್ಪಂದಕ್ಕೆ ಸಾಕ್ಷಿಯೆಂಬುದನ್ನು ಮರೆಯಬೇಡ,” ಎಂದನು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ನಿನ್ನನ್ನು ಅದು ತಪ್ಪಿಸುವುದು ತನ್ನ ಯೌವನಕಾಲದ ಪ್ರಿಯನನ್ನು ತ್ಯಜಿಸಿದವಳಿಂದ, ತನ್ನ ದೇವರ ಮುಂದೆ ಮಾಡಿದ ಒಪ್ಪಂದವನ್ನು ಮರೆತವಳಿಂದ.


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ.


ಆಹಾ, ನನ್ನ ಪ್ರಿಯಳೇ, ನೀನೆಷ್ಟು ಚೆಲುವೆ ಆಹಾ, ನೀನೆಷ್ಟು ಕೋಮಲೆ ನಿನ್ನ ನೇತ್ರಗಳು ಪಾರಿವಾಳಗಳಂತೆ! ನಲ್ಲೆ :


ಸಮುವೇಲನು ಪುನಃ, “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬುದಕ್ಕೆ ಸರ್ವೇಶ್ವರ ಹಾಗು ಅವರ ಅಭಿಷಿಕ್ತನು ಸಾಕ್ಷಿಯಾಗಿದ್ದಾರೆ,” ಎಂದನು. ಅವರು, “ಹೌದು, ಸರ್ವೇಶ್ವರ ಸಾಕ್ಷಿ ಆಗಿದ್ದಾರೆ,” ಎಂದು ನುಡಿದರು.


ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು.


ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಮಗನೇ, ಪರಸ್ತ್ರೀಯಲ್ಲಿ ಭ್ರಮೆ ಏಕೆ? ಅನ್ಯಳ ಎದೆ ತಬ್ಬಿಕೊಳ್ಳುವುದೇಕೆ?


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು