Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:9 - ಕನ್ನಡ ಸತ್ಯವೇದವು C.L. Bible (BSI)

9 “ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮಶಾಸ್ತ್ರೋಪದೇಶದಲ್ಲಿ ಮುಖದಾಕ್ಷಿಣ್ಯವನ್ನು ತೋರಿಸಿದ್ದರಿಂದ ನಾನಂತು ನಿಮ್ಮನ್ನು ಎಲ್ಲಾ ಜನರ ಮುಂದೆ ಮಾನಗೆಟ್ಟವರನ್ನಾಗಿಯೂ ಕೀಳಾದವರನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಾನು ಹೇಳಿರುವ ಪ್ರಕಾರ ನೀವು ಜೀವಿಸುತ್ತಿಲ್ಲ. ನೀವು ನನ್ನ ಉಪದೇಶವನ್ನು ಜನರಿಗೆ ತಿಳಿಸುವಾಗ ಮುಖದಾಕ್ಷಿಣ್ಯ ಮಾಡುತ್ತೀರಿ. ಈ ಕಾರಣದಿಂದಾಗಿ ನಿಮ್ಮನ್ನು ಗಣನೆಗೆ ಬಾರದವರಂತೆಯೂ ಜನರು ನಿಮ್ಮನ್ನು ಸನ್ಮಾನಿಸದಂತೆಯೂ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದ್ದರಿಂದ ನೀವು ನನ್ನ ಮಾರ್ಗಗಳನ್ನು ಕೈಗೊಳ್ಳದೆ, ನನ್ನ ನಿಯಮವನ್ನು ಬೋಧಿಸುವಾಗ ಮುಖದಾಕ್ಷಿಣ್ಯ ಮಾಡಿದ ಪ್ರಕಾರವೇ, ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆಯಾದವರನ್ನಾಗಿಯೂ, ನೀಚರನ್ನಾಗಿಯೂ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:9
30 ತಿಳಿವುಗಳ ಹೋಲಿಕೆ  

ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.


ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.


ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಎಸೆಯುವೆನು ನಿನ್ನ ಮೇಲೆ ಹೊಲಸನು ಕಳೆಯುವೆನು ನಿನ್ನ ಮಾನವನು ಪರಿಹಾಸ್ಯಕ್ಕೀಡುಮಾಡುವೆನು ನಿನ್ನನು.


ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು