Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:18
24 ತಿಳಿವುಗಳ ಹೋಲಿಕೆ  

“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.


ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು:


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.


ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”


ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ನೀವೆಲ್ಲರೂ ಮತ್ತೆ ಬನ್ನಿ ವಾದಕ್ಕೆ ನಿಮ್ಮಲ್ಲಿ ಜ್ಞಾನಿಯೊಬ್ಬನನ್ನೂ ನಾ ಕಾಣೆ.


ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.


“ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು