Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:8 - ಕನ್ನಡ ಸತ್ಯವೇದವು C.L. Bible (BSI)

8 ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರಿಂದ ಕದ್ದುಕೊಳ್ಳುವದನ್ನು ನಿಲ್ಲಿಸಿರಿ. ಮನುಷ್ಯನು ದೇವರಿಂದ ಕದ್ದುಕೊಳ್ಳಬಾರದು. ಆದರೆ ನೀವು ನನ್ನಿಂದ ಕದ್ದುಕೊಂಡಿದ್ದೀರಿ. “ನಿನ್ನಿಂದ ಏನು ಕದ್ದುಕೊಂಡಿದ್ದೇವೆ” ಎಂದು ಕೇಳುತ್ತೀರಾ? “ನಿಮ್ಮ ದಶಮ ಭಾಗವನ್ನು ನೀವು ನನಗೆ ಅರ್ಪಿಸಬೇಕಿತ್ತು. ವಿಶೇಷ ಕಾಣಿಕೆಗಳನ್ನು ನೀವು ನನಗೆ ಕೊಡಬೇಕಾಗಿತ್ತು. ಆದರೆ ನೀವು ಹಾಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:8
18 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು.


ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.


ಸ್ತುತಿಸಿರಿ ಆತನ ಶ್ರೀನಾಮ ಮಹಿಮೆಯನು I ಪೂಜಿಸಿರಿ ಪವಿತ್ರಾಂಬರರಾಗಿ ಆತನನು II


“ವ್ಯಭಿಚಾರ ಮಾಡಬಾರದು” ಎಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೇನು? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತೀಯೇನು?


ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ, ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು.


ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ.


ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’


ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು.


ಐದನೆಯ ವರ್ಷದಲ್ಲಿ ಅಂದು ಮೊದಲ್ಗೊಂಡು ಅದರ ಫಲಗಳನ್ನು ನೀವು ತಿನ್ನಬಹುದು. ನಿಮಗೆ ಹೆಚ್ಚು ಫಲ ದೊರಕುವುದು. ನಿಮ್ಮ ದೇವರಾದ ಸರ್ವೇಶ್ವರ ನಾನೇ.


ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು.


ಕುರಿಮೇಕೆಗಳನ್ನು ನೀನು ತರಲಿಲ್ಲ ನನಗೆ ಹೋಮಕ್ಕಾಗಿ ಬಲಿಗಳನ್ನು ಅರ್ಪಿಸಲಿಲ್ಲ ನನ್ನ ಘನತೆಗಾಗಿ ನಾ ನಿನ್ನನು ಒತ್ತಾಯಿಸಲಿಲ್ಲ ನೈವೇದ್ಯಕ್ಕಾಗಿ ನಾ ನಿನ್ನನು ಬೇಸರಗೊಳಿಸಲಿಲ್ಲ ಧೂಪಾರತಿಗಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು