Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ತಂದೆತಾಯಿಗಳು ಮಕ್ಕಳಿಗೂ ಮಕ್ಕಳು ತಂದೆತಾಯಿಗಳಿಗೂ ನಿಕಟ ಸಂಬಂಧಿಗಳಾಗುವಂತೆ ಅವನು ಮಾಡುವನು. ಇದು ನೆರವೇರಲೇಬೇಕು, ಇಲ್ಲದಿದ್ದಲ್ಲಿ ನಾನು ಬಂದು ನಿಮ್ಮ ದೇಶವನ್ನು ಸಂಪೂರ್ಣವಾಗಿ ನಾಶಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:6
28 ತಿಳಿವುಗಳ ಹೋಲಿಕೆ  

ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.


ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.


ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.


ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು.


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು