Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:20 - ಕನ್ನಡ ಸತ್ಯವೇದವು C.L. Bible (BSI)

20 ಅವರು ದೋಣಿಯಲ್ಲಿ ಕುಳಿತು ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಕೂಡಲೇ, ಯೇಸು ಅವರನ್ನು ಕರೆದರು. ಅವರೂ ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲೇ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವರು ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಕೂಡಲೆ ಇವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜು ತೆನಿ ಢೊನಾತ್ ಹೊತ್ತ್ಯಾಕ್ಡೆ ಗೆಲೊ ಅನಿ “ಮಾಜ್ಯಾ ಫಾಟ್ನಾ ಯೆವಾ” ಮನುನ್ ತೆಂಕಾ ಬಲ್ವುಲ್ಯಾನ್. ತನ್ನಾ ತೆನಿ ಅಪ್ನಾಚ್ಯಾ ಬಾಬಾಕ್ ಆಳಾಂಚ್ಯಾ ವಾಂಗ್ಡಾ ಥೈಚ್ ಸೊಡ್ಲ್ಯಾನಿ, ಅನಿ ಜೆಜುಚ್ಯಾ ವಾಂಗ್ಡಾ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:20
11 ತಿಳಿವುಗಳ ಹೋಲಿಕೆ  

“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು,


“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು,” ಎಂದನು. ಅದಕ್ಕೆ ಎಲೀಯನು, “ಹೋಗಿ ಬಾ; ನಾನು ನಿನಗೆ ಮಾಡಬೇಕಾದದ್ದನ್ನು ಮಾಡಿದ್ದೇನೆ,” ಎಂದು ಉತ್ತರಕೊಟ್ಟನು.


ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.


ಇನ್ನೂ ಸ್ವಲ್ಪ ಮುಂದಕ್ಕೆ ಹೋಗುತ್ತಿದ್ದಾಗ, ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನರನ್ನು ಯೇಸು ಕಂಡರು.


ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.


ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು