Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:32 - ಕನ್ನಡ ಸತ್ಯವೇದವು C.L. Bible (BSI)

32 ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸಂಜೆಯಾಗಿ ಹೊತ್ತು ಮುಣುಗಿದ ಮೇಲೆ ಜನರು ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನೂ ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅಂದು ಸೂರ್ಯನು ಮುಳುಗಿದ ಮೇಲೆ, ಜನರು ಕಾಯಿಲೆಯವರನ್ನೂ ದೆವ್ವಗಳಿಂದ ಪೀಡಿತರಾಗಿದ್ದವರನ್ನೂ ಆತನ ಬಳಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತ್ಯಾ ದಿಸ್ ಸಾಂಜ್ ಹೊಂವ್ಗೆತ್ ಯೆತಾನಾ, ಥೈತ್ಲ್ಯಾ ಲೊಕಾನಿ, ಸಗ್ಳ್ಯಾ ಸಿಕ್ ಹೊತ್ತ್ಯಾಕ್ನಿ, ಅನಿ ಗಿರೊಲಾಗಲ್ಲ್ಯಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:32
8 ತಿಳಿವುಗಳ ಹೋಲಿಕೆ  

ಸಂಜೆಯಾಯಿತು, ದೆವ್ವ ಹಿಡಿದ ಅನೇಕರನ್ನು ಯೇಸುವಿನ ಬಳಿಗೆ ಕರೆತರಲಾಯಿತು. ಯೇಸು ತಮ್ಮ ಒಂದು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದರು. ಮಾತ್ರವಲ್ಲ, ರೋಗಪೀಡಿತರೆಲ್ಲರನ್ನೂ ಗುಣಪಡಿಸಿದರು.


ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.


ಅವನನ್ನು ಸಬ್ಬತ್‍ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.


ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.


ಆಕೆ ಅವರೆಲ್ಲರನ್ನು ಸತ್ಕರಿಸಿದಳು.


ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು