Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅವನನ್ನು ದೃಷ್ಟಿಸಿನೋಡಿ ಪ್ರೀತಿಸಿ ಅವನಿಗೆ - ನಿನಗೆ ಒಂದು ಕಡಿಮೆಯಾಗಿದೆ; ಹೋಗು, ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ಪ್ರೆಮಾನ್ ತ್ಯಾ ಮಾನ್ಸಾಕ್ ಬಗಟ್ಲ್ಯಾನ್ ಅನಿ “ತಿಯಾ ಎಕ್ ಕರ್‍ತಲೆ ಹಾಯ್, ಜಾ ಅನಿ ತುಜೆಕ್ಡೆ ಹೊತ್ತೆ ಸಗ್ಳೆ ಇಕ್, ಅನಿ ಯೆಲ್ಲೆ ಪೈಸೆ ಗರಿಬಾಕ್ನಿ ದಿ, ಅನಿ ಸರ್‍ಗಾತ್ ತುಕಾ ಖರಿ ಸಾವ್ಕಾರ್ಕಿ ರ್‍ಹಾತಾ, ಮಾನಾ ಯೆ ಅನಿ ಮಾಜ್ಯಾ ಫಾಟ್ನಾ ಯೆ,” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:21
29 ತಿಳಿವುಗಳ ಹೋಲಿಕೆ  

ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.


ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು.


ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.


ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ.


ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು.


ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟುಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು