Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:32 - ಕನ್ನಡ ಸತ್ಯವೇದವು C.L. Bible (BSI)

32 ಜೆರುಸಲೇಮಿಗೆ ಪ್ರಯಾಣಮಾಡುತ್ತ ಇದ್ದಾಗ ಯೇಸುಸ್ವಾಮಿ ಎಲ್ಲರಿಗಿಂತ ಮುಂದೆ ನಡೆಯುತ್ತಿದ್ದರು. ಅದನ್ನು ನೋಡಿ ಶಿಷ್ಯರು ಆಶ್ಚರ್ಯಪಟ್ಟರು. ಅವರ ಹಿಂದೆ ಬರುತ್ತಿದ್ದವರು ದಿಗಿಲುಗೊಂಡರು. ಆಗ ಯೇಸು ಹನ್ನೆರಡುಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ತಮಗೆ ಸಂಭವಿಸಲಿರುವ ವಿಷಯಗಳನ್ನು ಮತ್ತೊಮ್ಮೆ ಅವರಿಗೆ ಹೇಳತೊಡಗಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಯೆರೂಸಲೇವಿುನ ದಾರಿಯನ್ನು ಹಿಡಿದು ಹೋಗುತ್ತಿರುವಾಗ ಯೇಸು ಅವರ ಮುಂದೆ ಮುಂದೆ ಹೋಗುತ್ತಿದ್ದನು. ಅವರು [ನೋಡಿ] ಬೆರಗಾದರು; ಆತನ ಹಿಂದೆ ಬರುವವರು ಭಯಪಡುವವರಾದರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತಿರಿಗಿ ಕರೆದುಕೊಂಡು ಮುಂದೆ ತನಗಾಗುವದನ್ನು ಹೇಳುವದಕ್ಕೆ ತೊಡಗಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು ಮತ್ತು ಆತನ ಜೊತೆಯಲ್ಲಿದ್ದ ಜನರು ಜೆರುಸಲೇಮಿಗೆ ಹೋಗುತ್ತಿರಲು ಯೇಸು ಅವರೆಲ್ಲರಿಗಿಂತ ಮುಂದೆ ಹೋಗುತ್ತಿದ್ದನು. ಅದನ್ನು ನೋಡಿ ಯೇಸುವಿನ ಶಿಷ್ಯರು ಬೆರಗಾದರು. ಅವರನ್ನು ಹಿಂಬಾಲಿಸಿ ಬರುತ್ತಿದ್ದ ಜನರು ಭಯಗೊಂಡರು. ಯೇಸು ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು, ಜೆರುಸಲೇಮಿನಲ್ಲಿ ತನಗೆ ಸಂಭವಿಸಲಿರುವುದನ್ನು ಅವರಿಗೆ ಹೇಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು. ಯೇಸು ಅವರ ಮುಂದಾಗಿ ಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಯೇಸುವಿನ ಹಿಂದೆ ಬರುತ್ತಿದ್ದವರು ಭಯಪಟ್ಟರು. ಯೇಸು ತಮ್ಮ ಹನ್ನೆರಡು ಮಂದಿಯನ್ನು ತಿರುಗಿ ಕರೆದು ತನಗೆ ಸಂಭವಿಸುವ ಸಂಗತಿಗಳನ್ನು ಅವರಿಗೆ ಹೇಳಲಾರಂಭಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜೆಜು ಅನಿ ತೆಚ್ಯಾ ವಾಂಗ್ಡಾ ಹೊತ್ತಿ ಲೊಕಾ ಜೆರುಜಲೆಮಾಚ್ಯಾ ವಾಟೆನ್ ಜಾವ್ನಗೆತ್ ರಾತಾನಾ, ಜೆಜು ಶಿಸಾಂಚ್ಯಾ ಫಿಡೆ-ಫಿಡೆ ಜಾವ್ನಗೆತ್ ಹೊತ್ತೊ, ಶಿಸಾ ಭಿಂಯಾವಲ್ಲ್ಯಾ ಸರ್ಕಿ ಹೊಲ್ಲಿ, ಅನಿ ತೆಂಚ್ಯಾ ವಾಂಗ್ಡಾ ಹೊತ್ತಿ ಲೊಕಾ ಭಿಂಯಾವಲ್ಲಿ. ಅನಿ ಎಗ್ದಾ ಜೆಜು ಬಾರಾ ಜಾನಾ ಶಿಸಾಕ್ನಿ ಕಡೆಕ್ ಬಲ್ವುನ್ ಘೆವ್ನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:32
12 ತಿಳಿವುಗಳ ಹೋಲಿಕೆ  

ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.


ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು.


ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.


ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು.


ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


“ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.


ಇದನ್ನೆಲ್ಲಾ ಹೇಳಿ ಆದಮೇಲೆ ಯೇಸುಸ್ವಾಮಿ ಅವರೆಲ್ಲರಿಗಿಂತ ಮುಂದಾಗಿ ನಡೆದು ಜೆರುಸಲೇಮಿನತ್ತ ತೆರಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು