Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:32 - ಕನ್ನಡ ಸತ್ಯವೇದವು C.L. Bible (BSI)

32 ‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮನುಷ್ಯರಿಂದ ಬಂತೆಂದು ಹೇಳಿದರೆ ಏನಾಗುವದೋ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಯೋಹಾನನು ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳುಕೊಂಡಿದ್ದದರಿಂದ ಇವರಿಗೆ ಜನರ ಭಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ನಾವು, ‘ಮನುಷ್ಯರಿಂದ ಬಂತು’ ಎಂದು ಹೇಳುವುದಾದರೆ, ನಮಗೆ ಜನರ ಭಯವಿದೆ. ಏಕೆಂದರೆ ಯೋಹಾನನು ನಿಜವಾಗಿಯೂ ಪ್ರವಾದಿ ಎಂದು ಎಲ್ಲರೂ ಎಣಿಸಿಕೊಂಡಿರುವರು,” ಎಂದು ತಮ್ಮಲ್ಲಿ ಚರ್ಚಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಅನಿ ಅಮಿ ಮಾನ್ಸಾಕ್ನಾ ಯೆಲ್ಲ್ಯಾ ಅದಿಕಾರ್‍ಯಾನ್ ಮನುನ್ ಮಟ್ಲ್ಯಾರ್ ಲೊಕಾ ಅಮ್ಚ್ಯಾ ವಿರೊದ್ ಹೊತ್ಯಾತ್ ತೆನಿ ಭಿಂಯಾಲ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜುವಾಂವ್ ಎಕ್ ಪ್ರವಾದಿ ಮನುನ್ ಲೊಕಾ ಮಾನಿತ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:32
15 ತಿಳಿವುಗಳ ಹೋಲಿಕೆ  

ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.


ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.


ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.


ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.


ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ.


“ದೇವರಿಂದ ಬಂದಿತೆಂದು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವನು.


ಆದುದರಿಂದ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು