Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:12 - ಕನ್ನಡ ಸತ್ಯವೇದವು C.L. Bible (BSI)

12 ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವನು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ಅವರು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ಹಿ ಕಾನಿ ಸಾಂಗ್ತಾನಾ ಥೈ ಹೊತ್ತೆ ಜುದೆವಾಂಚ್ಯಾ ವಡಿಲಾನಿ ಹಿ ಕಾನಿ ತೊ ಅಪ್ನಾಚ್ಯಾಚ್ ವಿರೊದ್ ಸಾಂಗುಕ್ ಲಾಗ್ಲಾ ಮನುನ್ ಯವ್ಜುನ್ ತೆಕಾ ಧರುಕ್ ಕಸ್ರತ್ ಕರ್‍ಲ್ಯಾನಿ, ಖರೆ ಥೈ ಹೊತ್ತ್ಯಾ ಲೊಕಾಂಚ್ಯಾ ತಾಂಡ್ಯಾಕ್ ಭಿಂವ್ನ್, ತೆಕಾ ಧರಿನಸ್ತಾನಾ ತೆಕಾ ಸೊಡುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:12
13 ತಿಳಿವುಗಳ ಹೋಲಿಕೆ  

ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.


ಕೆಲವರಿಗಂತೂ ಯೇಸುವನ್ನು ಹಿಡಿದು ಬಂಧಿಸಬೇಕೆನಿಸಿತು, ಆದರೆ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ಜೆರುಸಲೇಮಿನ ಕೆಲವುಮಂದಿ ಇದನ್ನು ಕೇಳಿ, “ಅವರು ಕೊಲ್ಲಬೇಕೆಂದು ಹವಣಿಸುತ್ತಾ ಇರುವುದು ಈತನನ್ನೇ ಅಲ್ಲವೆ?


‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು.


ಈ ಮಾತುಗಳನ್ನು ಕೇಳಿ ಅವರೆಲ್ಲರು ಬೆರಗಾದರು; ಯೇಸುವನ್ನು ಬಿಟ್ಟು ಅಲ್ಲಿಂದ ಹೊರಟೇಹೋದರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.


ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು