Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:14 - ಕನ್ನಡ ಸತ್ಯವೇದವು C.L. Bible (BSI)

14 ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ “ಗುರುಜಿ, ತಿಯಾ ಲೊಕಾ ಕಾಯ್ ಯೌವಜ್ತ್ಯಾತ್ ಮನುನ್ ಪರ್ವಾ ಕರಿನಸ್ತಾನಾ ಖರೆ ಅಸಲ್ಲೆ ಸಾಂಗ್ತೆ, ಅನಿ ಕೊನಾಚೆ ತೊಂಡ್ ಬಗಿನಸ್ತಾನಾ ಬೊಲ್ತೆ, ತಿಯಾ ಮಾನ್ಸಾ ಸಾಟ್ನಿ ದೆವಾಚಿ ಯವ್ಜನ್ ಕಾಯ್ ಮನುನ್ ಅಮ್ಕಾ ಸಾಂಗ್, ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಧರ್ಮಾಚ್ಯಾ ಖಾಯ್ದ್ಯಾ ಪರ್ಕಾರ್ ಸಮಾ ಹಾಯ್ ಕಾಯ್, ನಾ?” ಮನುನ್ ತೆಕಾ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:14
36 ತಿಳಿವುಗಳ ಹೋಲಿಕೆ  

ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಾನೇ ನಿಮ್ಮನ್ನು ದುಃಖಪಡಿಸಿದೆನಾದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ?


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


ನೀವು ಕಂದಾಯವನ್ನು ಕಟ್ಟುತ್ತಿರುವುದೂ ಈ ಕಾರಣದಿಂದಲೇ. ಅಧಿಕಾರಿಗಳು ದೇವರ ದಾಸರು. ಅವರು ತಮ್ಮ ಪ್ರಸ್ತುತ ಕಾರ್ಯಗಳನ್ನು ನಿರ್ವಹಿಸುವಾಗ ದೇವರ ಸೇವೆಯನ್ನು ಮಾಡುತ್ತಾರೆ.


ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.


ಹೀಗಿರುವಲ್ಲಿ, ನಾವು ರೋಮ್‍ ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ ತಿಳಿಸಿ,” ಎಂದು ಕೇಳಿದರು.


ಅದರಂತೆಯೇ ಅವನು ಅಲ್ಲಿಗೆ ಬಂದಕೂಡಲೆ ಯೇಸುವಿನ ಹತ್ತಿರಕ್ಕೆ ನೇರವಾಗಿ ಹೋಗಿ, ‘ಗುರುದೇವಾ’, ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


ಬಿಡಿಸೆನ್ನನು ಪ್ರಭು ಸುಳ್ಳುಬಾಯಿಂದ I ವಂಚಿಸುವ ನಾಲಿಗೆ ಉಳ್ಳವರಿಂದ II


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”


ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು.


ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು