Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:13 - ಕನ್ನಡ ಸತ್ಯವೇದವು C.L. Bible (BSI)

13 ನೀವು ನನ್ನವರು. ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ನನ್ನ ಹೆಸರಿನ ನಿವಿುತ್ತವಾಗಿ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನನ್ನನ್ನು ಹಿಂಬಾಲಿಸುವ ಕಾರಣ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೆ ಕೊನೆಯವರೆಗೆ ತಾಳುವವನು ರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾಕಾ ಲಾಗುನ್ ಹರ್ ಎಕ್ಲೊ ತುಮ್ಚೊ ದ್ವೆಸ್ ಕರ್‍ತ್ಯಾತ್. ಖರೆ ಸರ್ತ್ಯಾ ಕಾಲ್ ಸಗೊಳ್ ಕೊನ್ ವಿಶ್ವಾಸ್ ಕಳ್ದುನ್ ಘೆಯ್ನಾಸ್ತಾನಾ ರ್‍ಹಾತಾ, ತೊ ದೆವಾಚ್ಯಾ ನ್ಯಾಯ್ ತಿರ್ಪಾತ್ನಾ ಬಚಾವ್ ಹೊವ್ನ್ ದೆವಾಚ್ಯಾ ರಾಜಾತ್ ಜಾತಲಿ ಯೊಗ್ಯತಾ ಜೊಡುನ್ ಘೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:13
19 ತಿಳಿವುಗಳ ಹೋಲಿಕೆ  

ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


1335 ದಿನಗಳ ಮಟ್ಟಿಗೆ ವಿಶ್ವಾಸದಿಂದ ಕಾದಿರುವವರು ಧನ್ಯರು!


ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿ.


ಸಹೋದರ ಸಹೋದರನನ್ನೇ, ತಂದೆ ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು, ಅವರನ್ನು ಕೊಲ್ಲಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು