Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:9 - ಕನ್ನಡ ಸತ್ಯವೇದವು C.L. Bible (BSI)

9 “ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ತುಮಿ ಉಶಾರ್ಕಿನ್ ರ್‍ಹಾವಾ! ತುಮಿ ಮಾಜ್ಯಾ ಫಾಟ್ನಾ ಹಾಸಿ ಮನುನ್ ಲೊಕಾ ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತ್ಯಾತ್, ತೆಂಚ್ಯಾ ಸಿನಾಗೊಗಾತ್ನಿ ನ್ಹೆವ್ನ್ ಮಾರುಕ್ ಲಾವ್ತ್ಯಾತ್, ಮಾಜ್ಯಾ ಬದಲ್ ಸಾಕ್ಷಿ ಸಾಂಗುಕ್ ಮನುನ್ ಅದಿಕಾರ್‍ಯಾಂಚ್ಯಾ ಅನಿ ರಾಜಾಂಚ್ಯಾ ಇದ್ರಾಕ್ ತುಮ್ಕಾ ಇಬೆ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:9
37 ತಿಳಿವುಗಳ ಹೋಲಿಕೆ  

ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಅದಕ್ಕೆ ಯೇಸು ಹೀಗೆಂದರು: “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.


ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.


ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಜನಾಂಗಕ್ಕೆ ವಿರುದ್ಧ ಜನಾಂಗ, ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಇಳಿಯುವುವು. ಅಲ್ಲಲ್ಲಿ ಭೂಕಂಪಗಳು ಆಗುವುವು. ಕ್ಷಾಮ-ಡಾಮರಗಳು ತಲೆದೋರುವುವು. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು