Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:1 - ಕನ್ನಡ ಸತ್ಯವೇದವು C.L. Bible (BSI)

1 ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಸ್ಕ್ ಮನ್ತಲ್ಯಾ ಅನಿ ಇಸ್ಟ್ ಘಾಲಿನಸ್ತಾನಾ ಕರಲ್ಲ್ಯಾ ಭಾಕ್ರಿಚ್ಯಾ ಸನಾಕ್ ಅನಿ ಖಾಲಿ ದೊನ್ ದಿಸಾ ಹುರಲ್ಲಿ, ತನ್ನಾ ಮುಖ್ಯ ಯಾಜಕಾನಿ ಅನಿ ಖಾಯ್ದೆ ಸಿಕ್ವುತಲ್ಯಾನಿ ಜೆಜುಕ್ ಘುಟಾನಿ ಧರುನ್ ಜಿವಾನಿ ಮಾರುಚೆ ಮನುನ್ ಯವ್ಜುನ್ ಘೆವ್ನ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:1
23 ತಿಳಿವುಗಳ ಹೋಲಿಕೆ  

ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.


ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II


ಒಳಿತಿಗಿಂತ ಕೆಡಕು ಮಾಡುವುದು ನಿನಗಿಷ್ಟ I ಸತ್ಯಕ್ಕಿಂತ ಸುಳ್ಳಾಡುವುದೇ ನಿನ್ನ ಚಟ II


ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.


ಈಜಿಪ್ಟ್ ದೇಶದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೀಗೆಂದರು:


‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು; ಮಾಡಿದರೆ, ಜನರು ದಂಗೆ ಎದ್ದಾರು,’ ಎಂದು ಮಾತನಾಡಿಕೊಂಡರು.


ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಅಂದರೆ, ಪಾಸ್ಕಹಬ್ಬದ ಕುರಿಮರಿಯನ್ನು ಕೊಯ್ಯುವ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.


ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.


ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ದು ಕಾಣಿಕೆಯಾಗಿ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು