Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:14 - ಕನ್ನಡ ಸತ್ಯವೇದವು C.L. Bible (BSI)

14 ಅವನ ಹಿಂದೆಯೇ ಹೋಗಿ, ಅವನು ಯಾವ ಮನೆಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, “ನಮ್ಮ ಗುರು, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ನನಗೆ ಕೊಠಡಿ ಎಲ್ಲಿ?’ ಎಂದು ಕೇಳುತ್ತಾರೆ,” ಎಂದು ವಿಚಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಯಾವ ಮನೆಗೆ ಹೋಗುವನೋ ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ತನಗೆ ಭೋಜನಶಾಲೆ ಎಲ್ಲಿ ಎಂದು ಕೇಳುತ್ತಾನೆ ಎಂಬದಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಒಂದು ಮನೆಯೊಳಗೆ ನಡೆದು ಹೋಗುತ್ತಾನೆ. ನೀವು ಆ ಮನೆಯ ಯಜಮಾನನಿಗೆ, ‘ನಮ್ಮ ಗುರುವು ತನ್ನ ಶಿಷ್ಯರ ಸಂಗಡ ಪಸ್ಕ ಹಬ್ಬದ ಊಟ ಮಾಡಲು ಒಂದು ಕೋಣೆಯನ್ನು ತೋರಿಸಬೇಕೆಂದು ಕೇಳುತ್ತಾನೆ’ ಎಂದು ಹೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ತೊ ಖಲ್ಯಾ ಘರಾತ್ ಜಾವ್ನ್ ಗುಸ್ತಾ ಕಿ, ತ್ಯಾ ಘರಾತ್ ಜಾಂವಾ, ಅನಿ ತ್ಯಾ ಘರ್‍ಚ್ಯಾ ವಡ್ಲಾಕ್, ಅಮ್ಚ್ಯಾ ಗುರುಜಿನ್; ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಪಾಸ್ಕಾಚೆ ಜೆವಾನ್ ಕರ್‍ತಲಿ ಖೊಲಿ ಖೈ ಹಾಯ್ ಮನುನ್ ಇಚಾರ್ಲಾನ್ಯಾಯ್?” ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:14
8 ತಿಳಿವುಗಳ ಹೋಲಿಕೆ  

ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು.


ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು.


ಯಾರಾದರೂ ನಿಮ್ಮನ್ನು ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ. ಅವರು ಇದನ್ನು ಬೇಗನೆ ಹಿಂದಕ್ಕೆ ಕಳುಹಿಸಿಕೊಡುವರು,’ ಎಂದು ಹೇಳಿ,” ಎಂದರು.


ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ಯೇಸು ಅವರಲ್ಲಿ ಇಬ್ಬರಿಗೆ, “ನೀವು ಪಟ್ಟಣಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತವನೊಬ್ಬನು ನಿಮ್ಮನ್ನು ಎದುರುಗೊಳ್ಳುವನು.


ಅವನು ಮೇಲುಪ್ಪರಿಗೆಯಲ್ಲಿ ಸಿದ್ಧವಾಗಿರುವ ಹಾಗೂ ಸುಸಜ್ಜಿತವಾದ ದೊಡ್ಡ ಕೊಠಡಿಯನ್ನು ತೋರಿಸುವನು. ಅಲ್ಲಿ ನಮಗೆ ಊಟ ಸಿದ್ಧಮಾಡಿರಿ,” ಎಂದು ಹೇಳಿಕಳುಹಿಸಿದರು.


ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ಕೊಠಡಿ ಎಲ್ಲಿ, ಎಂದು ನಿಮ್ಮನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾರೆ,’ ಎನ್ನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು