Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:44 - ಕನ್ನಡ ಸತ್ಯವೇದವು C.L. Bible (BSI)

44 ಗುರುದ್ರೋಹಿಯಾದ ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ, ಆತನೇ ಆ ವ್ಯಕ್ತಿ, ಆತನನ್ನು ಬಂಧಿಸಿ, ಭದ್ರವಾಗಿ ಕರೆದೊಯ್ಯಿರಿ,” ಎಂದು ಮೊದಲೇ ಸೂಚನೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ - ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡುಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಧರುನ್ ದಿತಲ್ಯಾನ್ ತ್ಯಾ ಲೊಕಾಕ್ನಿ ಎಕ್ ಘುರ್ತ್ ದಿಲ್ಲ್ಯಾನ್, “ಮಿಯಾ ಕೊನಾಕ್ ಉಪ್ಪಾ ದಿತಾಕಿ ತೊಚ್ ತುಮ್ಕಾ ಪಾಜೆ ಹೊಲ್ಲೊ, ತೆಕಾ ತುಮಿ ಧರಾ ಅನಿ ಉಶಾರ್ಕಿನ್ ಘೆವ್ನ್ ಜಾವಾ” ಮನುನ್ ಸಾಂಗಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:44
13 ತಿಳಿವುಗಳ ಹೋಲಿಕೆ  

ಮಿತ್ರನು ಕೊಡುವ ಗುದ್ದು ಹಿತಕರ; ಶತ್ರುವು ಕೊಡುವ ಮುದ್ದು ಮೋಸಕರ.


ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು.


ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು!


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆ ತೋರಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆ ತೋರಬೇಕು.


ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು.


ಎದ್ದೇಳಿ, ಹೋಗೋಣ. ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ, ನೋಡಿ,” ಎಂದರು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ಗುಂಪು ಅವನೊಂದಿಗಿತ್ತು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ಅದರಂತೆಯೇ ಅವನು ಅಲ್ಲಿಗೆ ಬಂದಕೂಡಲೆ ಯೇಸುವಿನ ಹತ್ತಿರಕ್ಕೆ ನೇರವಾಗಿ ಹೋಗಿ, ‘ಗುರುದೇವಾ’, ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು