Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:49 - ಕನ್ನಡ ಸತ್ಯವೇದವು C.L. Bible (BSI)

49 ಆದರೆ ಪವಿತ್ರಗ್ರಂಥದಲ್ಲಿ ಬರೆದಿರುವುದು ನೆರವೇರುವಂತೆ ಇದೆಲ್ಲಾ ಸಂಭವಿಸಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನಾನು ದಿನಾಲು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಶಾಸ್ತ್ರ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಪ್ರತಿದಿನ ದೇವಾಲಯದಲ್ಲಿ ನಾನು ಉಪದೇಶಿಸುತ್ತಾ ನಿಮ್ಮೊಡನೆ ಇದ್ದೆನು. ಅಲ್ಲಿ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಈ ಎಲ್ಲಾ ಸಂಗತಿಗಳು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನಡೆದಿವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ನಾನು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಾ ನಿಮ್ಮ ಸಂಗಡ ಇದ್ದೆನು. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಪವಿತ್ರ ವೇದಗಳಲ್ಲಿ ಬರೆದಿದ್ದು ನೆರವೇರಲೇಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಮಿಯಾ ಸದ್ದಿಚ್ ದೆವಾಚ್ಯಾ ಗುಡಿತ್ ಸಿಕ್ವುನ್ಗೆತ್ ಹೊತ್ತೊ, ಥೈ ತುಮಿ ಮಾಕಾ ಧರುಕ್ನ್ಯಾಸಿ,ಖರೆ ಹೆ ಸಗ್ಳೆ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಬಾಸೆನ್ ಹೊಲೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:49
27 ತಿಳಿವುಗಳ ಹೋಲಿಕೆ  

ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು.


ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.


ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ! ಅದು ಹೇಗಾದೀತು?


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ಆದರೆ, ಈ ಪ್ರಕಾರವೇ ಆಗಬೇಕು ಎನ್ನುವ ಪವಿತ್ರಗ್ರಂಥದ ವಾಕ್ಯ ನೆರವೇರುವುದಾದರೂ ಹೇಗೆ?” ಎಂದರು.


“ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.


ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.


ಯೇಸು ಮತ್ತು ಶಿಷ್ಯರು ಪುನಃ ಜೆರುಸಲೇಮಿಗೆ ಬಂದರು. ಯೇಸು ದೇವಾಲಯದ ಆವರಣದಲ್ಲಿ ತಿರುಗಾಡುತ್ತಿದ್ದಾಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅವರ ಬಳಿಗೆ ಬಂದು,


ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪುಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶಮಾಡಿದರು.


ಯೇಸುಸ್ವಾಮಿ ಆ ಗುಂಪಿಗೆ, “ದರೋಡೆಗಾರರನ್ನು ಹಿಡಿಯುವುದಕ್ಕೋ ಎಂಬಂತೆ ನನ್ನನ್ನು ಬಂಧಿಸಲು ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ಬರಬೇಕಾಗಿತ್ತೇ? ನಾನು ಪ್ರತೀದಿನ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಬೋಧನೆಮಾಡುತ್ತಾ ಇದ್ದೆ; ಆಗ ನೀವು ನನ್ನನ್ನು ಬಂಧಿಸಲಿಲ್ಲ.


ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು