Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:54 - ಕನ್ನಡ ಸತ್ಯವೇದವು C.L. Bible (BSI)

54 ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು ಹೊರಾಂಗಣದಲ್ಲಿ, ಪಹರೆಯವರ ಜೊತೆಯಲ್ಲಿ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಮತ್ತು ಪೇತ್ರನು ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದೊಳಗೂ ಬಂದು ಓಲೇಕಾರರ ಸಂಗಡ ಬೆಂಕಿಯ ಮುಂದೆ ಕೂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಪೇತ್ರನು ಯೇಸುವನ್ನು ದೂರದಲ್ಲಿ ಹಿಂಬಾಲಿಸುತ್ತಾ ಪ್ರಧಾನಯಾಜಕನ ಮನೆಯ ಅಂಗಳದೊಳಕ್ಕೆ ಹೋಗಿ, ಕಾವಲುಗಾರರೊಡನೆ ಕುಳಿತುಕೊಂಡು ಬೆಂಕಿಯಿಂದ ಚಳಿಕಾಯಿಸಿಕೊಳ್ಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಪೆದ್ರು ಧುರ್-ಧುರ್ನಾಚ್ ಜೆಜುಚ್ಯಾ ಫಾಟ್ನಾ -ಫಾಟ್ನಾ ಮಹಾಯಾಜಕಾಚ್ಯಾ ಘರಾಚ್ಯಾ ದಾರಾತ್ ಸಗೊಳ್ ಯೆಲೊ, ಥೈ ರಾಕ್ವಾಲ್ಯಾಂಚ್ಯಾ ವಾಂಗ್ಡಾ ಬಸುನ್ ಆಗ್ ಶೆಕುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:54
15 ತಿಳಿವುಗಳ ಹೋಲಿಕೆ  

ಆಗ ಚಳಿಯಿದ್ದುದರಿಂದ ಸೇವಕರೂ ಕಾವಲಾಳುಗಳೂ ಇದ್ದಲಿನ ಬೆಂಕಿಮಾಡಿ, ಸುತ್ತಲೂ ನಿಂತು ಚಳಿಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳತೊಡಗಿದನು.


ಇತ್ತ ಮುಖ್ಯಯಾಜಕರು ಮತ್ತು ಪ್ರಜಾಪ್ರಮುಖರು ‘ಕಾಯಫ’ ಎಂಬ ಪ್ರಧಾನ ಯಾಜಕನ ಭವನದಲ್ಲಿ ಒಟ್ಟುಗೂಡಿದರು.


ಇತ್ತ ಪೇತ್ರನು ನಿಂತು ಚಳಿಕಾಯಿಸಿಕೊಳ್ಳುತ್ತಾ ಇದ್ದನು. ಅಲ್ಲಿದ್ದವರು, “ನೀನು ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?’ ಎಂದು ಕೇಳಿದರು. ಪೇತ್ರನು, “ಇಲ್ಲ, ನಾನು ಶಿಷ್ಯನಲ್ಲ,” ಎಂದು ನಿರಾಕರಿಸಿದನು.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರದಿಂದ ಇದ್ದು ಪ್ರಾರ್ಥನೆಮಾಡಿ, ಆತ್ಮಕ್ಕೇನೋ ಆಸಕ್ತಿ ಇದೆ; ಆದರೆ ದೇಹಕ್ಕೆ ಶಕ್ತಿ ಸಾಲದು,” ಎಂದರು.


ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.


ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.


ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.


ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.


ಪೇತ್ರನು ಹೊರಾಂಗಣದಲ್ಲಿ ಇದ್ದನು. ಆಗ ಪ್ರಧಾನಯಾಜಕನ ಸೇವಕಿಯೊಬ್ಬಳು ಅಲ್ಲಿಗೆ ಬಂದಳು.


ಅನಂತರ ಅವರು ಯೇಸುಸ್ವಾಮಿಯನ್ನು ಬಂಧಿಸಿ ಪ್ರಧಾನಯಾಜಕನ ಭವನಕ್ಕೆ ಕರೆದುಕೊಂಡು ಹೋದರು. ದೂರದಿಂದ ಪೇತ್ರನು ಹಿಂದೆಹಿಂದೆಯೇ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು