Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:65 - ಕನ್ನಡ ಸತ್ಯವೇದವು C.L. Bible (BSI)

65 ಅನಂತರ, ಅವರಲ್ಲಿ ಕೆಲವರು ಯೇಸುವಿನ ಮೇಲೆ ಉಗುಳಿದರು. ಅವರ ಮುಖಕ್ಕೆ ಮುಸುಕುಹಾಕಿ, ಅವರನ್ನು ಗುದ್ದಿ, “ಗುದ್ದಿದವರು ಯಾರು? ಪ್ರವಾದಿಸು ನೋಡೋಣ,” ಎನ್ನುತ್ತಿದ್ದರು. ಇದಲ್ಲದೆ ಅಲ್ಲಿದ್ದ ಪಹರೆಯವರು ಅವರಿಗೆ ಏಟಿನ ಮೇಲೆ ಏಟು ಕೊಟ್ಟು ತಮ್ಮ ವಶಕ್ಕೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ತೆಂಚ್ಯಾತ್ಲ್ಯಾ ಥೊಡ್ಯಾನಿ ಜೆಜುಕ್ ಥುಕ್ಲ್ಯಾನಿ, ಅನಿ ತೆಚ್ಯಾ ಡೊಳ್ಯಾಕ್ನಿ ಫಾಳಿ ಭಾಂದುನ್ ತೆಕಾ ಡುಬ್ರಿತ್ ಮುಟ್ಕ್ಯಾನಿ ಮಾರ್‍ಲ್ಯಾನಿ ಅನಿ “ತುಕಾ ಮಾರಲ್ಲೆ ಕೊನ್ ಮನುನ್ ಸಾಂಗ್” ಮನುನ್ ಇಚಾರ್‍ಲ್ಯಾನಿ. ಅನಿ ರಾಕ್ವಾಲ್ಯಾನಿ ಠಪ್ರಾಕ್ಯಾ ಮಾರುನ್ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:65
17 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ್ದೇ, ಪ್ರಧಾನ ಯಾಜಕ ಅನನೀಯನು ಪೌಲನ ಬಾಯಮೇಲೆ ಹೊಡೆಯುವಂತೆ ಹತ್ತಿರದಲ್ಲೇ ನಿಂತಿದ್ದವರಿಗೆ ಆಜ್ಞಾಪಿಸಿದನು.


“ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.


ಕೋಲಿನಿಂದ ಅವರ ತಲೆಯ ಮೇಲೆ ಹೊಡೆದು, ಉಗುಳಿ, ಮೊಣಕಾಲೂರಿ ಗೌರವಿಸುವಂತೆ ನಟಿಸಿದರು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.


ನನಗೆ ಅಸಹ್ಯಪಟ್ಟು ದೂರಸರಿಯುತ್ತಾರೆ ನನ್ನ ಮೇಲೆ ಉಗುಳುವುದಕ್ಕೂ ಹಿಂಜರಿಯದಿದ್ದಾರೆ.


ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.


ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು. ಮೀಕಾಯೆಹುವು,


ಅವರ ಮೇಲೆ ಉಗುಳಿದರು. ಆ ಕೋಲನ್ನು ಕಿತ್ತುಕೊಂಡು ತಲೆಯಮೇಲೆ ಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು