Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:19 - ಕನ್ನಡ ಸತ್ಯವೇದವು C.L. Bible (BSI)

19 ಕೋಲಿನಿಂದ ಅವರ ತಲೆಯ ಮೇಲೆ ಹೊಡೆದು, ಉಗುಳಿ, ಮೊಣಕಾಲೂರಿ ಗೌರವಿಸುವಂತೆ ನಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ಆತನ ಮುಂದೆ ಮೊಣಕಾಲೂರಿ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಬೆತ್ತದಿಂದ ಯೇಸುವಿನ ತಲೆಯ ಮೇಲೆ ಹೊಡೆದು, ಅವರ ಮೇಲೆ ಉಗುಳಿ ಮೊಣಕಾಲೂರಿ ಅವರಿಗೆ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ತೆಚ್ಯಾ ಟಕ್ಲ್ಯಾ ವರ್‍ತಿ ಭೆತ್ತಾಚ್ಯಾ ಖಾಟಿನಿ ಮಾರುನ್, ತೊಂಡಾ ವರ್‍ತಿ ಥುಕುನ್, ಇದ್ರಾಕ್ ಡೊಗ್ಲಾ ಟೆಕುನ್ ತೆಚಿ ತುಜ್ಯಾ ಕರ್ಲ್ಯಾ ಸಾರ್ಕೆ ನಾಟಕ್ ಕರುನ್ ತೆಕಾ ಎಡ್ಸಡುನ್ ದಾಕ್ವುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:19
32 ತಿಳಿವುಗಳ ಹೋಲಿಕೆ  

ಅನಂತರ, ಅವರಲ್ಲಿ ಕೆಲವರು ಯೇಸುವಿನ ಮೇಲೆ ಉಗುಳಿದರು. ಅವರ ಮುಖಕ್ಕೆ ಮುಸುಕುಹಾಕಿ, ಅವರನ್ನು ಗುದ್ದಿ, “ಗುದ್ದಿದವರು ಯಾರು? ಪ್ರವಾದಿಸು ನೋಡೋಣ,” ಎನ್ನುತ್ತಿದ್ದರು. ಇದಲ್ಲದೆ ಅಲ್ಲಿದ್ದ ಪಹರೆಯವರು ಅವರಿಗೆ ಏಟಿನ ಮೇಲೆ ಏಟು ಕೊಟ್ಟು ತಮ್ಮ ವಶಕ್ಕೆ ತೆಗೆದುಕೊಂಡರು.


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.


ಅದಕ್ಕೆ ಆತನಿಗೆ ದೊರೆತ ಉತ್ತರವಾದರೂ ಏನು? “ಬಾಳ್‍ದೇವತೆಯ ವಿಗ್ರಹಕ್ಕೆ ಅಡ್ಡಬೀಳದ ಏಳುಸಾವಿರ ಜನರನ್ನು ನನಗಾಗಿ ಉಳಿಸಿಕೊಂಡಿದ್ದೇನೆ,” ಎಂದಲ್ಲವೆ?


ಸೈನಿಕರು ಮುಂದೆ ಬಂದು ಹುಳಿರಸವನ್ನು ಅವರತ್ತ ಒಡ್ಡಿ,


ಕಡೆಗೆ ಹೆರೋದನು ತನ್ನ ಸೈನಿಕರೊಡನೆ ಸೇರಿ ಯೇಸುವನ್ನು ಅಣಕಿಸಿ ಅವಮಾನಪಡಿಸಿದನು. ರಾಜವಸ್ತ್ರವನ್ನು ವೇಷಭೂಷಣವಾಗಿ ಅವರಿಗೆ ತೊಡಿಸಿ ಪಿಲಾತನ ಬಳಿಗೆ ಮರಳಿ ಕಳುಹಿಸಿಕೊಟ್ಟನು.


ಯೇಸುಸ್ವಾಮಿಯನ್ನು ಬಂಧಿಸಿ ಹಿಡಿದುಕೊಂಡಿದ್ದವರು ಅವರನ್ನು ಅಣಕಿಸಿದರು, ಹೊಡೆದರು.


ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.


ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ಊರ ಬಾಗಿಲಲಿ ಕೂರುವವರ ಹರಟೆಗೆ ಕಾರಣನಾದೆನಯ್ಯಾ I ಸಾರಾಯಿ ಮದ್ಯಸಾರ ಕುಡಿವವರ ಪದ್ಯವಸ್ತುವಾದೆನಯ್ಯಾ II


ದೇವರು ನಿಮ್ಮನ್ನು ಪರಿಶೋಧಿಸಿದರೆ ನಿಮಗೆ ಒಳಿತೆ? ಮನುಷ್ಯರಂತೆ ಆತನನ್ನು ಮೋಸಗೊಳಿಸಲಾದೀತೆ?


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.


ಅವರು ಮತ್ತೆ ನೆಲದವರೆಗೆ ಬಾಗಿ ನಮಸ್ಕಾರ ಮಾಡಿ, “ನಿಮ್ಮ ಸೇವಕರಾದ ನಮ್ಮ ತಂದೆ ಇಂದಿಗೂ ಕ್ಷೇಮದಿಂದ ಇದ್ದಾರೆ,” ಎಂದರು.


ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿ ಸಾಷ್ಟಾಂಗವೆರಗಿ ಸರ್ವೇಶ್ವರ ಸ್ವಾಮಿಯನ್ನು ವಂದಿಸಿದನು.


ಅವರ ಮೇಲೆ ಉಗುಳಿದರು. ಆ ಕೋಲನ್ನು ಕಿತ್ತುಕೊಂಡು ತಲೆಯಮೇಲೆ ಹೊಡೆದರು.


ತರುವಾಯ, “ಯೆಹೂದ್ಯರ ಅರಸನಿಗೆ ಜಯವಾಗಲಿ,” ಎಂದು ನಾಟಕೀಯವಾಗಿ ವಂದಿಸಿದರು.


ಹೀಗೆ ಯೇಸುವನ್ನು ಪರಿಹಾಸ್ಯಮಾಡಿದ ಬಳಿಕ, ಆ ನಸುಗೆಂಪು ಮೇಲಂಗಿಯನ್ನು ತೆಗೆದುಹಾಕಿ, ಅವರ ಬಟ್ಟೆಯನ್ನೇ ಮತ್ತೆ ತೊಡಿಸಿದರು. ಬಳಿಕ ಶಿಲುಬೆಗೆ ಏರಿಸುವುದಕ್ಕಾಗಿ ಅವರನ್ನು ಕರೆದುಕೊಂಡುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು