Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:32 - ಕನ್ನಡ ಸತ್ಯವೇದವು C.L. Bible (BSI)

32 ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಸ್ರಾಯೇಲ್ಯರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದುಬಂದರೆ ನಾವು ನೋಡಿ ನಂಬೇವು ಎಂದು ತಮ್ಮತಮ್ಮೊಳಗೆ ಹಾಸ್ಯದಿಂದ ಮಾತಾಡುತ್ತಿದ್ದರು. ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮೆಸ್ಸಿಯಾ, ಇಸ್ರಾಯೆಲಾಚೊ ರಾಜಾ ಅತ್ತಾ ಕುರ್ಸಾ ವೈನಾ ಉತ್ರುನ್ ಯೆಂವ್ದಿ ಬಗುವಾ, ತನ್ನಾ ತೆಚ್ಯಾ ವರ್‍ತಿ ಅಮಿ ವಿಶ್ವಾಸ್ ಥವ್ತಾವ್”. ಮಟ್ಲ್ಯಾನಿ, ಜೆಜುಚ್ಯಾ ಅಜು-ಬಾಜುಕ್ ಕುರ್ಸಾರ್ ಮಾರಲ್ಲ್ಯಾ ಚೊರಾನಿಬಿ ತಸೆಚ್ ಎಡ್ಸಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:32
16 ತಿಳಿವುಗಳ ಹೋಲಿಕೆ  

ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಕೂಡ ಅದೇ ರೀತಿ ಅಣಕಿಸಿದರು.


ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.


ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಅವರಲ್ಲಿ ಕೆಲವರು ಅಪ್ರಾಮಾಣಿಕರಾಗಿ ನಡೆದುಕೊಂಡಿದ್ದರೆ ಏನಾಯಿತು? ದೇವರ ಪ್ರಾಮಾಣಿಕತನಕ್ಕೆ ಭಂಗಬರಲು ಸಾಧ್ಯವೆ?


ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಅವರ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ‘ಈತ ಯೆಹೂದ್ಯರ ಅರಸ’ ಎಂದು ಬರೆಯಲಾಗಿತ್ತು.


“ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.


ಅಲ್ಲದೆ ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು