Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:43 - ಕನ್ನಡ ಸತ್ಯವೇದವು C.L. Bible (BSI)

43 ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬವನು ಬಂದು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. ಇವನು ಹಿರೀಸಭೆಯವರಲ್ಲಿ ಘನವಂತನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತಸೆ ಮನುನ್ ಅರೆಮಾಥಿಯಾ ಮನ್ತಲ್ಯಾ ಗಾಂವಾಚೊ ಜುಜೆ ಯೆಲೊ,ತೊ ಜುದೆವಾಂಚ್ಯಾ ಮಂತ್ರಿ ಮಂಡಳಾಚೊ ಮರ್ಯಾದಿಚೊ ಸದಸ್ಯಾ, ತೊ ದೆವಾಚ್ಯಾ ರಾಜ್ ಯೆತಲೆ ವಾಟ್ ಬಗುನ್ಗೆತ್ ಹೊತ್ತೊ, ತೊ ಧಯ್ರೊ ಕರುನ್ ಪಿಲಾತಾಕ್ಡೆ ಗೆಲೊ ಅನಿ ಜೆಜುಚೆ ಮಡೆ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:43
16 ತಿಳಿವುಗಳ ಹೋಲಿಕೆ  

ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಅವರಲ್ಲಿ ಅನೇಕರು ವಿಶ್ವಾಸಿಗಳಾದರು. ಅನೇಕ ಗ್ರೀಕ್ ಕುಲೀನ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳಾದರು.


ಅರಿಮತಾಯ ಊರಿನ ಜೋಸೆಫ್ ಎಂಬುವನೂ ಕೂಡ ಯೇಸುವಿನ ಶಿಷ್ಯರಲ್ಲಿ ಒಬ್ಬನು. ಈತನು ಯೆಹೂದ್ಯರಿಗೆ ಹೆದರಿ ತಾನು ಶಿಷ್ಯನೆಂದು ತೋರಿಸಿಕೊಳ್ಳುತ್ತಿರಲಿಲ್ಲ. ಮೇಲೆ ಹೇಳಿದ್ದೆಲ್ಲ ನಡೆದಾದ ಮೇಲೆ ಈತನು ಯೇಸುವಿನ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಪಿಲಾತನಿಂದ ಅಪ್ಪಣೆ ಕೇಳಿದನು. ಪಿಲಾತನು ಒಪ್ಪಿಗೆ ಕೊಡಲು ಈತನು ಬಂದು ಪಾರ್ಥಿವ ಶರೀರವನ್ನು ಕೊಂಡೊಯ್ದನು.


ಸಂಜೆಯಾಯಿತು. ಅರಿಮತಾಯ ಊರಿನ ಜೋಸೆಫ್ ಎಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಈತನು ಸಹ ಯೇಸುವಿನ ಶಿಷ್ಯನಾಗಿದ್ದನು.


ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು ಹೊರಾಂಗಣದಲ್ಲಿ, ಪಹರೆಯವರ ಜೊತೆಯಲ್ಲಿ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.


ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.


ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.


ಯೇಸು ಇಷ್ಟುಬೇಗನೆ ಸತ್ತಿದ್ದಾರೆಂದು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಅವನು ಶತಾಧಿಪತಿಯನ್ನು ಕರೆಯಿಸಿ, “ಯೇಸು ಈಗಾಗಲೇ ಮೃತನಾದನೋ?” ಎಂದು ವಿಚಾರಿಸಿದನು.


ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು