Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:1 - ಕನ್ನಡ ಸತ್ಯವೇದವು C.L. Bible (BSI)

1 ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಬ್ಬತ್‍ದಿನ ಕಳೆದ ಮೇಲೆ, ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಆತನ ದೇಹಕ್ಕೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಾಬ್ಬಾತ್ ಸರುನ್ ಗೆಲ್ಲ್ಯಾ ತನ್ನಾ, ಮರಿ ಮಾಗ್ದೆಲಿನ್, ಜಾಕೊಬಾಚಿ ಬಾಯ್ ಮರಿ ಅನಿ ಸಲೊಮಿ ಜೆಜುಚ್ಯಾ ಮಡ್ಯಾಕ್ ಲಾವುಕ್ ಮನುನ್ ಮ್ಹಾಗ್ಲೆ ಸುಗಂದ್ ತೆಲ್ ಇಕಾತ್ ಘೆವ್ನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:1
19 ತಿಳಿವುಗಳ ಹೋಲಿಕೆ  

ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.


ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.


ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು.


ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು.


ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ, ಸಮಾಧಿಯಿಂದ ಹೊರಕ್ಕೆ ಬಂದು, ಅಲ್ಲಿಂದ ಓಡಿಹೋದರು. ಭಯದ ನಿಮಿತ್ತ ಅವರು ಯಾರಿಗೂ ಏನನ್ನೂ ಹೇಳಲಿಲ್ಲ.


ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿ ಮರಿಯಳು ಯೇಸುವಿನ ಪಾರ್ಥಿವ ಶರೀರವನ್ನು ಸಮಾಧಿಮಾಡಿದ್ದ ಸ್ಥಳವನ್ನು ಗುರುತಿಸಿಕೊಂಡರು.


ತನ್ನಿಂದ ಏನು ಸಾಧ್ಯವೋ ಅದನ್ನು ಈಕೆ ಮಾಡಿದ್ದಾಳೆ; ನನ್ನ ದೇಹವನ್ನು ಮುಂಚಿತವಾಗಿಯೇ ಸುಗಂಧ ತೈಲದಿಂದ ಲೇಪಿಸಿ ಅದನ್ನು ಶವಸಂಸ್ಕಾರಕ್ಕಾಗಿ ಸಿದ್ಧಪಡಿಸಿದ್ದಾಳೆ.


ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.


ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.


ಅಂದು ಶುಕ್ರವಾರ - ಸಿದ್ಧತೆಯ ದಿನ. ಇನ್ನೇನು ಸಬ್ಬತ್ ಪ್ರಾರಂಭವಾಗುವುದರಲ್ಲಿತ್ತು.


ಅಷ್ಟರಲ್ಲೇ ಸಂಜೆಯಾಗಿತ್ತು. ಸಬ್ಬತ್ತಿನ ಹಿಂದಿನ ದಿನವಾಗಿದ್ದ ಅಂದು ‘ಸಿದ್ಧತೆ’ಯ ದಿನ ಆಗಿತ್ತು. ಆದುದರಿಂದ ಅರಿಮತಾಯ ಊರಿನ ಜೋಸೆಫ್ ಎಂಬಾತನು ಧೈರ್ಯತಂದುಕೊಂಡು, ಪಿಲಾತನ ಸಾನ್ನಿಧ್ಯಕ್ಕೆ ಹೋಗಿ, ಯೇಸುಸ್ವಾಮಿಯ ಪಾರ್ಥಿವ ಶರೀರವನ್ನು


ತರುವಾಯ ತನ್ನ ಸೇವಕರಲ್ಲಿ ಶವಲೇಪಕರಾದವರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ಲೇಪಿಸಿ ಸಿದ್ಧಪಡಿಸಿರಿ,” ಎಂದು ಅಪ್ಪಣೆಕೊಟ್ಟನು. ಅವರು ಹಾಗೆಯೇ ಮಾಡಿದರು.


ಭಾನುವಾರ ಮುಂಜಾನೆ ಬೇಗನೆ ಹೊರಟು ಸೂರ್ಯೋದಯ ಸಮಯಕ್ಕೆ ಸಮಾಧಿಯನ್ನು ತಲುಪಿದರು.


ಭಾನುವಾರ ಮುಂಜಾನೆ ಆ ಮಹಿಳೆಯರು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಯ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು