Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:20 - ಕನ್ನಡ ಸತ್ಯವೇದವು C.L. Bible (BSI)

20 ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಶಿಸಾನಿ ಸಗ್ಳ್ಯಾಕ್ಡೆ ಜಾವ್ನ್ ಬರಿ ಖಬರ್ ಸಾಂಗ್ಲ್ಯಾನಿ ಅನಿ ದೆವಾನ್ ತೆಂಚ್ಯಾ ವಾಂಗ್ಡಾ ಕಾಮ್ ಕರುನ್ ಸುಮಾರ್ ವಿಚಿತ್ರಾ ಕರ್ತಲ್ಯಾಚ್ಯಾ ವೈನಾ ಹೆನಿ ಸಾಂಗ್ತಲಿ ಬರಿ ಖಬರ್ ಖರಿ ಹಾಯ್ ಮನುನ್ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:20
15 ತಿಳಿವುಗಳ ಹೋಲಿಕೆ  

ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆಸೇರುತ್ತಿದ್ದರು.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು