Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:1 - ಕನ್ನಡ ಸತ್ಯವೇದವು C.L. Bible (BSI)

1 ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಲವು ದಿನಗಳಾದ ಮೇಲೆ ಆತನು ಕಪೆರ್ನೌವಿುಗೆ ತಿರಿಗಿ ಬಂದನು. ಮನೆಯಲ್ಲಿದ್ದಾನೆಂಬ ವರ್ತಮಾನವು ಹಬ್ಬಿದಾಗ ಬಹುಜನರು ಕೂಡಿ ಬಂದಿದ್ದರಿಂದ ಬಾಗಿಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ಉಲ್ಲಿ ದಿಸಾ ಹೊಲ್ಲ್ಯಾಮಾನಾ, ಜೆಜು ಕಫರ್‍ನವ್ ಮನ್ತಲ್ಯಾ ಗಾವಾಕ್ ಪರ್ತುನ್ ಯೆಲೊ. ತೊ ಥೈ, ಎಕ್ ಘರಾತ್ ಹಾಯ್ ಮನ್ತಲಿ ಖಬರ್, ಲೊಕಾಕ್ನಿ ಗಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:1
13 ತಿಳಿವುಗಳ ಹೋಲಿಕೆ  

ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿ, ಅವರ ಬಳಿಗೆ ಬಂದು, ಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನು.


ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ.


ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು.


ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.


ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.


ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು.


ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸಮೀಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು.


ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು.


ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು.


ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು.


ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.


ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು