Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:12 - ಕನ್ನಡ ಸತ್ಯವೇದವು C.L. Bible (BSI)

12 ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಎದ್ದು ಕೂಡಲೆ ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟು ಹೋದನು. ಅದಕ್ಕೆ ಎಲ್ಲರು ಬೆರಗಾಗಿ - ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ ಇಲ್ಲವೆಂದು ಹೇಳುತ್ತಾ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ತಾಬೊಡ್ತೊಬ್ ತೊ ಮಾನುಸ್ ಉಟುನ್ ಇಬೆ ರ್‍ಹಾಲೊ, ಅನಿ ಅಪ್ನಾಚೆ ಹಾತ್ರಾನ್ ಘೆವ್ನ್ ಸಗ್ಳ್ಯಾಂಚ್ಯಾ ಇದ್ರಾಕ್ನಾಚ್ ಚಲುನ್ಗೆತ್ ಗೆಲೊ, ಹೆ ಬಗಟಲ್ಲಿ ಸಗ್ಳಿ ಲೊಕಾ ಅಜಾಪ್ ಹೊಲಿ, ಅನಿ “ದೆವಾ, ಹೆ ಕಸ್ಲೆ ಅಜಾಪ್ ಅಮಿ ಬಗಿ ಸರ್ಕೆ ಕರ್‍ಲೆ!” ಮನುನ್ ದೆವಾಕ್ ಹೊಗಳ್ಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:12
13 ತಿಳಿವುಗಳ ಹೋಲಿಕೆ  

ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


ಹುಟ್ಟುಕುರುಡನಿಗೆ ಯಾರಾದರೂ ಕಣ್ಣುಕೊಟ್ಟ ಸುದ್ದಿಯನ್ನು ಲೋಕಸೃಷ್ಟಿಯಾದಾಗಿನಿಂದ ಒಬ್ಬರೂ ಕೇಳಿಲ್ಲ.


ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು.


ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು.


ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.


ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.


“ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.


ಮೂಕರು ಮಾತನಾಡುವುದನ್ನೂ ಅಂಗವಿಕಲರು ಸ್ವಸ್ಥರಾಗುವುದನ್ನೂ ಕುಂಟರು ನಡೆಯುವುದನ್ನೂ ಕುರುಡರು ನೋಡುವುದನ್ನೂ ಈ ಜನರು ಕಂಡು ಆಶ್ಚರ್ಯಚಕಿತರಾಗಿ ಇಸ್ರಯೇಲಿನ ದೇವರನ್ನು ಕೊಂಡಾಡಿದರು.


“ಇವರು ದಾವೀದನ ಕುಲಪುತ್ರರಾಗಿರಬಹುದೇ!’ ಎಂದುಕೊಂಡರು.


“ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು