Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:20 - ಕನ್ನಡ ಸತ್ಯವೇದವು C.L. Bible (BSI)

20 ಮದುವಣಿಗನು ಅವರಿಂದ ಅಗಲಬೇಕಾದ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ; ಆ ಕಾಲದಲ್ಲೇ ಉಪವಾಸಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಕಾಲ ಬರುತ್ತದೆ. ಆಗ ಅವನ ಗೆಳೆಯರು ವ್ಯಸನಪಡುತ್ತಾರೆ, ಉಪವಾಸ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಎಕ್ ದಿಸ್ ತೊ ನ್ಹವ್ರೊ, ತೆಂಕಾ ಸೊಡುನ್ ಜಾತಲೊ ಎಳ್ ಯೆತಾ, ತನ್ನಾ ತೆನಿ ಉಪಾಸ್ ಕರ್‍ತ್ಯಾತ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:20
29 ತಿಳಿವುಗಳ ಹೋಲಿಕೆ  

ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು.


ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.


ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.


ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.


ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.


ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಆಗ ಯೇಸು ತಮ್ಮ ಶಿಷ್ಯರಿಗೆ, “ ‘ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ.


ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II


ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.


ಬಡಬಗ್ಗರು ನಿಮ್ಮ ಬಳಿಯಲ್ಲಿ ಯಾವಾಗಲೂ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿ ಇರುವುದಿಲ್ಲ,” ಎಂದರು.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು.


“ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.


ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು