Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:25 - ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಕೊರತೆಯುಳ್ಳವರಾಗಿ ಹಸಿದಾಗ ಏನು ಮಾಡಿದನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗಲೂ ಅವಶ್ಯಕತೆಯಲ್ಲಿದ್ದಾಗಲೂ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಜೆಜುನ್ “ದಾವಿದಾಕ್ ಅನಿ ತೆಚ್ಯಾ ವಾಂಗ್ಡಿಯಾಕ್ನಿ ಭುಕ್‍ಲಾಗಲ್ಲಿ, ತನ್ನಾ ತೆಂಕಾ ಖಾವ್ಕ್ ಕಾಯ್ಬಿ ನಸಲ್ಲೆ, ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ಪವಿತ್ರ್ ಪುಸ್ತಕಾತ್ ವಾಚುಕ್ನ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:25
11 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.


ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?


ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು.


ಇದಲ್ಲದೆ, ಸತ್ತವರು ಪುನರುತ್ಥಾನ ಹೊಂದುವ ವಿಷಯದಲ್ಲಿ ಹೇಳುವುದಾದರೆ,


ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?


“ಮಕ್ಕಳು ಹೇಳುವುದು ನಿನಗೆ ಕೇಳಿಸುತ್ತಿದೆಯೋ?” ಎಂದು ಕೋಪಾವೇಶದಿಂದ ಯೇಸುವನ್ನು ಪ್ರಶ್ನಿಸಿದರು. “ಹೌದು, ಕೇಳಿಸುತ್ತದೆ; ‘ಬಾಲಬಾಲೆಯರ ಬಾಯಿಂದಲೂ ಮೊಲೆಗೂಸುಗಳ ನಾಲಿಗೆಯಿಂದಲೂ ನಿಮಗೆ ಸರ್ವಸ್ತುತಿ ಸಲ್ಲುವಂತೆ ಮಾಡಿದ್ದೀರಿ’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಎಂದೂ ಓದಿಲ್ಲವೆ?” ಎಂದು ಉತ್ತರಿಸಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ,


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು.


ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು