Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:27 - ಕನ್ನಡ ಸತ್ಯವೇದವು C.L. Bible (BSI)

27 ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಆತನು - ಸಬ್ಬತ್‍ದಿನವು ಮನುಷ್ಯರಿಗೋಸ್ಕರ ಉಂಟಾಯಿತೇ ಹೊರತು ಮನುಷ್ಯರು ಸಬ್ಬತ್ ದಿನಕ್ಕೋಸ್ಕರ ಉಂಟಾಗಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಂತರ ಯೇಸು ಫರಿಸಾಯರಿಗೆ, “ಸಬ್ಬತ್‌ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್‌ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅನಂತರ ಯೇಸು ಅವರಿಗೆ, “ಮನುಷ್ಯನು ಸಬ್ಬತ್ ದಿನಕ್ಕಾಗಲಿ ಅಲ್ಲ, ಸಬ್ಬತ್ ದಿನವು ಮನುಷ್ಯನಿಗಾಗಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ಜೆಜುನ್ ಫಾರಿಜೆವಾಕ್ನಿ, “ಸಬ್ಬಾತಾಚೊ ದಿಸ್, ಮಾನ್ಸಾಕ್ ಮಜತ್ ಕರುಕ್ ಮನುನ್ ಕರಲ್ಲೊ ಹಾಯ್. ಸಬ್ಬತಾಚ್ಯಾ ದಿಸಾನ್ ಮಾನ್ಸಾಚ್ಯಾ ವರ್‍ತಿ ಅದಿಕಾರ್ ಚಾಲ್ವುಕ್ ಮನುನ್ ಕರಲ್ಲೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:27
13 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ.


ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು.


ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.


ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವುವು’ ಎಂದು ಹೇಳಿದೆ.


ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.


ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿ ಮಾಡಬಹುದಾದರೆ ಅದೇ ಸಬ್ಬತ್ ದಿನದಲ್ಲಿ ನಾನು ಒಬ್ಬ ಮನುಷ್ಯನನ್ನು ಸಂಪೂರ್ಣ ಸ್ವಸ್ಥಪಡಿಸಿದ್ದಕ್ಕೆ ನೀವು ಸಿಟ್ಟಾಗಬೇಕೆ?


ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.


‘ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ಆಜ್ಞಾಪಿಸಿದಂತೆ ನೀನು ವಿಶ್ರಾಂತಿ ದಿನವನ್ನು ಪವಿತ್ರವಾಗಿ ಆಚರಿಸು.


ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು